Webdunia - Bharat's app for daily news and videos

Install App

ಖರ್ಗೆಗೆ ಚುನಾವಣಾ ಆಯೋಗದಿಂದ ರೆಡ್ ಸಿಗ್ನಲ್

Webdunia
ಬುಧವಾರ, 1 ಮೇ 2019 (18:08 IST)
ಶಾಸಕರ ಸಭೆ ಕರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಮಾಡಿಕೊಂಡ ಮನವಿಗೆ ಚುನಾವಣಾ ಆಯೋಗ ರೆಡ್ ಸಿಗ್ನಲ್ ನೀಡಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ತೀವ್ರಗೊಂಡಿದೆ ಬರ ಪರಿಸ್ಥಿತಿ. ಜಿಲ್ಲೆಯ ಏಳೂ ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಾಸಕರ ಸಭೆ ಕರೆಯುವಂತೆ ಆಯೋಗಕ್ಕೆ ಸಚಿವ ಮನವಿ ಮಾಡಿಕೊಂಡಿದ್ರು. ಆದರೆ ಲೋಕಸಭೆ ಚುನಾವಣೆ ಹಾಗೂ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ತೀವ್ರ ಬರ ಇರೋ ಹಿನ್ನೆಲೆಯಲ್ಲಿ ಶಾಸಕರ ಮತ್ತು ಅಧಿಕಾರಿಗಳ ಸಭೆ ಕರೆಯಲು ಅನಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಆದರೆ ಪ್ರಿಯಾಂಕ್ ಖರ್ಗೆ ಮನವಿಯನ್ನು ತಿರಸ್ಕರಿಸಿದೆ ಚುನಾವಣಾ ಆಯೋಗ. ಉಪ ಮುಖ್ಯ ಚುನಾವಣಾಧಿಕಾರಿ ಹೆಚ್.ಜ್ಞಾನೇಶ್ ಅವರಿಂದ ಕಲಬುರ್ಗಿ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಾಸಕರ ಸಭೆ ಕರೆಯಲು ಅವಕಾಶವಿಲ್ಲ ಎಂದಿದ್ದಾರೆ ಜ್ಞಾನೇಶ್. ಬರ ನಿರ್ವಹಣೆಗೆ ತೊಂದರೆಯಾಗದಂತೆ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments