Webdunia - Bharat's app for daily news and videos

Install App

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

Webdunia
ಶುಕ್ರವಾರ, 9 ಫೆಬ್ರವರಿ 2018 (10:50 IST)
ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು,’ ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್‍ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್‍ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ ವಿಚಾರವಾಗಿ ಸಿಪಿಐ ಮತ್ತು ಸಿಪಿಎಂ ಜೊತೆ ಕೂಡ ಚರ್ಚೆ ನಡೆಯುತ್ತಿದೆ. ಅವರು ಒಪ್ಪಿಗೆ ನೀಡಿದರೆ ಅವರ ಜೊತೆ ಕೂಡ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಈಗಾಗಲೇ ಜನತೆಯ ಆಶೀರ್ವಾದ ಪಡೆದಿದ್ದಾರೆ. ಇಂತಹ ಕ್ಷೇತ್ರಗಳನ್ನು ಗುರುತಿಸಿ ಇಪ್ಪತ್ತು ಕ್ಷೇತ್ರಗಳನ್ನು ಬಿಟ್ಟುಕೊಡುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments