Webdunia - Bharat's app for daily news and videos

Install App

ಚುನಾವಣೆಯಲ್ಲಿ ಸೋಲು ಗೆಲುವು ಸಹಜ: ರಮ್ಯಾಗೆ ಅಂಬಿ ಅಂಕಲ್ ಸಲಹೆ

Webdunia
ಸೋಮವಾರ, 19 ಮೇ 2014 (15:04 IST)
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ರಮ್ಯಾಗೆ ಸಚಿವ ಅಂಬಿ ಅಂಕಲ್ ಸಮಾಧಾನದ ಹೇಳಿಕೆ ನೀಡಿದ್ದಾರೆ, 
 
ಚುನಾವಣೆಗಳಲ್ಲಿ ಸೋಲು ಗೆಲುವು ಸಹಜ ತಾಳ್ಮೆಯಿಂದಿರಬೇಕು. ಮುಂದಿನ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಗಳಿಸುತ್ತೀರಿ ಎಂದು ಭರವಸೆ ನೀಡಿದ್ದಾರೆ.
 
ಮಂಡ್ಯ ಜಿಲ್ಲೆಯಲ್ಲಿರುವ ಎಸ್‌.ಎಂ.ಕೃಷ್ಣ ಬಣ ಮತ್ತು ಸಚಿವ ಅಂಬರೀಷ್ ಬಣಗಳ ತಿಕ್ಕಾಟದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಇದೀಗ ಸಚಿವ ಅಂಬರೀಷ್ ಹೇಳಿಕೆ ಹೊರಬಿದ್ದಿದೆ.
 
ರಮ್ಯ ಇಂದು ದೆಹಲಿಗೆ ತೆರಳಿ ಕಾಂಗ್ರ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸೋಲಿನ ಕಾರಣಗಳನ್ನು ವಿವರಿಸಲಿದ್ದಾರೆ ಎನ್ನುವ ವರದಿಗಳಿಂದಾಗಿ ಗುಂಪುಗಾರಿಕೆ ನಡೆಸಿದ ಮುಖಂಡರಲ್ಲಿ ಆತಂಕ ಮನೆ ಮಾಡಿದೆ. 
 
ತಮ್ಮ ಹೋರಾಟದಿಂದಾಗಿಯೇ ಬಿಜೆಪಿ ಅಭ್ಯರ್ಥಿ ಶಿವಲಿಂಗಯ್ಯ ಠೇವಣಿ ಕಳೆದುಕೊಂಡಿದ್ದಾರೆ.  ಸಾಂಘಿಕ ಹೋರಾಟದಿಂದಾಗಿಯೇ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿದೆ ಎಂದು ಸಚಿವ ಅಂಬರೀಷ್ ಸಮಾಧಾನ ಹೇಳಿದ್ದಾರೆ.     

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments