Publish Date: Tue, 06 Feb 2018 (17:40 IST)
Updated Date: Tue, 06 Feb 2018 (17:42 IST)
ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಅಗ್ನಿ ಪರೀಕ್ಷೆಯಾಗಿದೆ ಎಂದು ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಬಲವನ್ನು ಹೆಚ್ಚಿಸಿಕೊಂಡಿದೆ. ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳಿಸುವ ವಿಶ್ವಾಸವಿದೆ ಎಂದಿದ್ದಾರೆ.
ಇದೇವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ನಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಬಳಿಕ ಹೈದರಾಬಾದ್ ಕರ್ನಾಟಕಕ್ಕೆ ಬರುತ್ತಿರುವ ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ಮುಂಬೈ, ಮೈಸೂರು ಹಾಗೂ ಮಂಗಳೂರು ಭಾಗದಲ್ಲೂ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.