Webdunia - Bharat's app for daily news and videos

Install App

ಅಲ್ಪಸಂಖ್ಯಾತಳಾಗಿದ್ದರಿಂದ ಚುನಾವಣೆಯಲ್ಲಿ ಸೋಲನುಭವಿಸಿದೆ: ಮಮತಾ

Webdunia
ಮಂಗಳವಾರ, 29 ಆಗಸ್ಟ್ 2017 (18:30 IST)
ನಾನು ಅಲ್ಪಸಂಖ್ಯಾತಳಾಗಿದ್ದರಿಂದ ಕಳೆದ 2008ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಿ ಸೋಲನುಭವಿಸಿದೆ ಎಂದು ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆ ಪುತ್ರಿ ಮಮತಾ ನಿಚ್ಚಾನಿ ಹೇಳಿದ್ದಾರೆ. 

ನಗರದ ವಿದ್ಯಾಭವನದಲ್ಲಿ ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆಯವರ 91ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಗಡೆ ತಮ್ಮ ಕಾರ್ಯಕ್ರಮಗಳಿಂದ ಜನಾನುರಾಗಿದ್ದರು ಎಂದು ಬಣ್ಣಿಸಿದರು. 
 
ದಿವಂಗತ ರಾಮಕೃಷ್ಣ ಹೆಗಡೆ ಅವರ ಭಾವಚಿತ್ರಕ್ಕೆ ಮಮತಾ ಸೇರಿದಂತೆ ಇತರ ಗಣ್ಯರು ಶೂ ಧರಿಸಿಯೇ ಪುಷ್ಪನಮನಗೈದಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿತು.
 
ನಾನು ಅಲ್ಪಸಂಖ್ಯಾತಳು ಅಂದರೆ ಜಾತಿಯಲ್ಲಿ ಬ್ರಾಹ್ಮಣ ಮಹಿಳೆ. ನನ್ನ ಬಳಿ ಹಣ ಬಲವಿಲ್ಲ, ದೇಹ ಬಲವಂತೂ ಇಲ್ಲವೇ ಇಲ್ಲ. ಇದು ಚುನಾವಣೆ ಸುಧಾರಣೆಗೆ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.
 
ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ, ಜೆಡಿಯು ಮುಖಂಡ ಎಂಪಿ ನಾಡಗೌಡ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments