Webdunia - Bharat's app for daily news and videos

Install App

ಗ್ಯಾರಂಟಿ ಹೊರೆ ಜನರ ತಲೆಗೆ: ವಿದ್ಯುತ್ ಬಿಲ್ ಜೊತೆ ನೌಕರರ ವೆಚ್ಚಕ್ಕೂ ಇನ್ನು ನೀವೇ ಹೊಣೆ

Krishnaveni K
ಗುರುವಾರ, 26 ಜೂನ್ 2025 (09:22 IST)
ಬೆಂಗಳೂರು: ಕರ್ನಾಟಕ ಗ್ಯಾರಂಟಿ ಯೋಜನೆಗಳಿಗಾಗಿ ಜನರ ತಲೆಗೆ ಈಗ ಹೊಸ ಹೊರೆಯನ್ನು ಕಟ್ಟಲಾಗಿದೆ. ವಿದ್ಯುತ್ ಬಿಲ್ ಜೊತೆಗೆ ನೌಕರರ ವೆಚ್ಚವನ್ನೂ ಇನ್ನು ಗ್ರಾಹಕರೇ ಹೊರಬೇಕು.

ಇದೆಲ್ಲಾ ಗ್ಯಾರಂಟಿ ಯೋಜನೆಗಳ ಫಲ ಎಂದು ಜನ ಹಿಡಿಶಾಪ ಹಾಕುತ್ತಿದ್ದಾರೆ.  ಇಲೆಕ್ಟ್ರಿಕ್ ಬಿಲ್ ಜೊತೆಗೆ ಇಂಧನ ಇಲಾಖೆ ಅಥವಾ ಕೆಪಿಟಿಸಿಎಲ್ ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡಲಾಗುತ್ತಿದೆ. ನೌಕರರಿಗೆ ಸರ್ಕಾರ ಹಾಗೂ ಇಂಧನ ಇಲಾಖೆ ನೌಕರರಿಗೆ ನೀಡಬೇಕಾಗಿರುವ ಸೌಕರ್ಯಕ್ಕೆ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಬೆಸ್ಕಾಂ ಬಿಲ್ ನಲ್ಲಿ ಈ ಹೊಸ ಸೇರ್ಪಡೆ ನೋಡಿ ಗ್ರಾಹಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವಿದ್ಯುತ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದರ ಮೇಲಿನಿಂದ ಈಗ ನೌಕರರ ವೆಚ್ಚವನ್ನೆಲ್ಲಾ ಗ್ರಾಹಕರ ತಲೆಗೆ ಕಟ್ಟುವುದು ಎಷ್ಟು ಸರಿ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರತಿ ಯುನಿಟ್ ವಿದ್ಯುತ್ ಮೇಲೆ 36 ಪೈಸೆ ಹೆಚ್ಚಳ ವಸೂಲಿ ಮಾಡಲಾಗುತ್ತಿದೆ. ಇದು ಯಾವ ನ್ಯಾಯ? ಇದು ಹಗಲು ದರೋಡೆ ಅಲ್ಲವೇ? ನೌಕರರ ವೆಚ್ಚವನ್ನು ನಾವು ಯಾಕೆ ಹೊರಬೇಕು? ಸರ್ಕಾರ ಯಾಕಿದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.

ಇದರ ಬಗ್ಗೆ ಸಾರ್ವಜನಿಕರು ನ್ಯಾಯಾಲಯಕ್ಕೆ ದೂರು ನೀಡಬೇಕು ಎಂದು ಆಗ್ರಹ ಕೇಳಿಬಂದಿದೆ. ಇನ್ನು ಎರಡು ವರ್ಷಗಳ ಕಾಲ ಈ ಹಗಲು ದರೋಡೆ ಮುಂದುವರಿಯಲಿದ್ದು ಇದಕ್ಕೆ ಕೆಪಿಟಿಸಿಎಲ್ ಕೂಡಾ ಅನುಮೋದನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಆರೆಂಜ್, ಯೆಲ್ಲೊ ಅಲರ್ಟರ್ ಎಲ್ಲೆಲ್ಲಿ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಮುಂದಿನ ಸುದ್ದಿ
Show comments