Webdunia - Bharat's app for daily news and videos

Install App

ರೈತರಿಗೆ ಸತತ 5 ಗಂಟೆಗಳ ಕಾಲ ವಿದ್ಯುತ್

Webdunia
ಮಂಗಳವಾರ, 17 ಅಕ್ಟೋಬರ್ 2023 (15:42 IST)
ಮಳೆ ಕೊರತೆಯಿಂದಾಗಿ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್​​ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್‌ ನೀಡಲು ಸೂಚಿಸಲಾಗಿದೆ. ಇದಕ್ಕೆ ಹೊರಗಿನಿಂದ ವಿದ್ಯುತ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದು ಮೆ.ವ್ಯಾಟ್ ವಿದ್ಯುತ್ತನ್ನೂ ಉತ್ಪಾದನೆ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಇದರಿಂದಾಗಿ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ ಎಂದು ಹೇಳಿದರು. ಕಬ್ಬು ಅರೆಯುವಿಕೆಯಿಂದ ವಿದ್ಯುತ್ ಕೋ ಜನರೇಷನ್​​ನತ್ತಲೂ ಗಮನಹರಿಸಲು ಸೂಚಿಸಲಾಗಿದೆ. ಲೋಡ್ ಶೆಡ್ಡಿಂಗ್​​ನಿಂದ ರೈತರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments