Webdunia - Bharat's app for daily news and videos

Install App

ಮತ್ತೆ ವಿದ್ಯುತ್ ಬೆಲೆ ಏರಿಕೆ ಶಾಕ್: ವಿದ್ಯುತ್ ಖರೀದಿ ಹೊರೆ ಗ್ರಾಹಕರ ಮೇಲೆ

Krishnaveni K
ಶುಕ್ರವಾರ, 8 ನವೆಂಬರ್ 2024 (14:10 IST)
ಬೆಂಗಳೂರು: ರಾಜ್ಯಾದ್ಯಂತ ಸಾಕಷ್ಟು ಮಳೆಯಾಗಿದ್ದರೂ ಮತ್ತೆ ಗ್ರಾಹಕರಿಗೆ ವಿದ್ಯುತ್ ಬೆಲೆ ಏರಿಕೆಯ ಶಾಕ್ ಕೊಡಲು ಎಲ್ಲಾ ವಿದ್ಯುತ್ ನಿಗಮಗಳೂ ಸಿದ್ಧವಾಗಿದೆ. ವಿದ್ಯುತ್ ಖರೀದಿ ಹೊರೆಯನ್ನು ಗ್ರಾಹಕರ ಮೇಲೆ ಹಾಕಲು ಸಿದ್ಧತೆ ನಡೆದಿದೆ.

ಬೆಸ್ಕಾಂ ಸೇರಿದಂತೆ ಎಲ್ಲಾ ವಿದ್ಯುತ್ ನಿಗಮಗಳೂ ಬೆಲೆ ಏರಿಕೆ ಮಾಡಲು ಸಿದ್ಧತೆ ಮಾಡಿಕೊಂಡಿವೆ. ಈ ತಿಂಗಳ ಅಂತ್ಯಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ವರದಿ ಸಲ್ಲಿಸಲಿವೆ. ವರದಿಯಲ್ಲಿರುವ ಅಂಶಗಳನ್ನು ಒಪ್ಪಿಕೊಂಡು ದರ ಏರಿಕೆಗೆ ಒಪ್ಪಿಗೆ ಕೊಟ್ಟರೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆಯಾಗುವುದು ಖಚಿತ.

ಸದ್ಯಕ್ಕೆ ರಾಜ್ಯದ ಎಲ್ಲಾ ಜಲಾಶಯಗಳೂ ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಗೆ ಜೂನ್ ವರೆಗೂ ತೊಂದರೆಯಿಲ್ಲ. ಹಾಗಿದ್ದರೂ ಬೇಸಿಗೆಯಲ್ಲಿ ಸಹಜವಾಗಿಯೇ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ. ಆಗ ವಿದ್ಯುತ್ ಖರೀದಿ ಮಾಡುವುದು ಅನಿವಾರ್ಯವಾಗುತ್ತದೆ. ಈ ಖರೀದಿ ವೆಚ್ಚವನ್ನು ಗ್ರಾಹಕರ ಹೆಗಲಿಗೇರಿಸಲು ನಿಗಮಗಳು ಯೋಜನೆ ರೂಪಿಸಿವೆ.

ರಾಜ್ಯದಲ್ಲಿ ಇರುವ ಬೇಡಿಕೆ ಗಮನಿಸಿದರೆ ಕೇವಲ ಜಲ ವಿದ್ಯುತ್ ಉತ್ಪನ್ನವೊಂದೇ ಸಾಲುವುದಿಲ್ಲ. ಆಗ ಶಾಖ ವಿದ್ಯುತ್ ಉತ್ಪಾದನೆಯತ್ತ ಗಮನಹರಿಸಬೇಕಾಗುತ್ತದ.ೆ ಇವುಗಳ ದರ ಪ್ರತಿ ಯೂನಿಟ್ ಗೆ 7.88 ರಷ್ಟಿದೆ. ಶಾಖ ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಹೊರರಾಜ್ಯದಿಂದ ತರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಹೆಗಲಿಗೆ ವರ್ಗಾಯಿಸಲು ಚಿಂತನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments