Webdunia - Bharat's app for daily news and videos

Install App

ಹುಲಿ ಹಿಡಿಯಲು ಬಂದ ಆನೆ ನಾಪತ್ತೆ!

Webdunia
ಗುರುವಾರ, 6 ಡಿಸೆಂಬರ್ 2018 (19:16 IST)
ಹುಲಿ ಹಿಡಿಯಲು ಕಾಯಾಚರಣೆಗೆ ಬಂದಿದ್ದ ಆನೆಯೇ ಕಾಡಿನೊಳಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
 ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಬಳಿಯ ಅಂತರಸಂತೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ತಾಲ್ಲೂಕಿನ ಅಂತರಸಂತೆ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಹುಲಿ, ಗ್ರಾಮದ ಹಸುಗಳ ಮೇಲೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.

ಅರಣ್ಯ ಇಲಾಖೆಯು ಹುಲಿ ಹಿಡಿಯುವ ಕಾರ್ಯಾಚರಣೆ  ಆರಂಭಿಸಿದ್ದರು. ಕಾರ್ಯಾಚರಣೆಗಾಗಿ ದಸರಾ ಆನೆ ಅರ್ಜುನ ಜೊತೆ ನಾಲ್ಕು ಆನೆಗಳು ಬಂದಿದ್ದವು. ನಾಲ್ಕು ಆನೆಗಳಲ್ಲಿ ಅಶೋಕ ಎಂಬ ಆನೆ ಕಾರ್ಯಾಚರಣೆ ವೇಳೆ ಪಟಾಕಿ ಶಬ್ದಕ್ಕೆ ಬೆದರಿ ಮಾವುತನನ್ನು ಕೆಳಗೆ ಬೀಳಿಸಿ ಕಾಡಿನೊಳಗೆ ನಾಪತ್ತೆಯಾಗಿದೆ.

ಸಣ್ಣಪುಟ್ಟ ಗಾಯಗಳಿಂದ ಮಾವುತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗ ಅರಣ್ಯ ಇಲಾಖೆಯೂ ಹುಲಿ ಕಾರ್ಯಾಚರಣೆ ನಿಲ್ಲಿಸಿ ಕಾಡಿನೊಳಗೆ ತಪ್ಪಿಸಿ ಕೊಂಡಿರುವ ಅಶೋಕ ಆನೆ ಹುಡುಕುವ ಕಾರ್ಯಚರಣೆ ಪ್ರಾರಂಭಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments