Webdunia - Bharat's app for daily news and videos

Install App

ಸುಸಜ್ಜಿತ ಆಂಬುಲೆನ್ಸ್‌ನನ್ನು ಕಾವೇರಿ ಆಸ್ಪತ್ರೆಗೆ ಹಸ್ತಾಂತರಿಸಿದ ಎಲ್ಸಿಯಾ ಟ್ರಸ್ಟ್‌

Webdunia
ಮಂಗಳವಾರ, 9 ನವೆಂಬರ್ 2021 (21:20 IST)
hospitalಬೆಂಗಳೂರು: ಬಡವರಿಗೆ ಉಚಿತ ಸೇವೆ ನೀಡುವ ಉದ್ದೇಶದಿಂದ ಎಲೆಕ್ಟ್ರಾನಿಕ್  ಸಿಟಿ ಇಂಡಸ್ಟ್ರೀಸ್  ಅಸೋಸಿಯೇಷನ್ (ಎಲ್ಸಿಯಾ) ಟ್ರಸ್ಟ್ ಕಾವೇರಿ ಆಸ್ಪತ್ರೆಗೆ ಉಚಿತವಾಗಿ ಅತ್ಯಾಧುನಿಕ ಆಂಬುಲೆಸ್‌ನನ್ನು ಹಸ್ತಾಂತರಿಸಿದೆ. 
 
ಐಟಿ-ಬಿಟಿ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ನೂತನ ಆಂಬುಲೆನ್ಸ್‌ಗೆ ಚಾಲನೆ ನೀಡಿದರು.  
ಹೆವ್ಲೆಟ್ ಪ್ಯಾಕರ್ಡ್ (ಇಂಡಿಯಾ) ಸಾಫ್ಟ್‌ವೇರ್‌ ಆಪರೇಷನ್ ಸಂಸ್ಥೆಯು (ಎಪಿಇ) ಈ ಆಂಬುಲೆನ್ಸ್‌ನನ್ನು ಎಲ್ಸಿಯಾಗೆ ಕೊಡುಗೆಯಾಗಿ ನೀಡಿತ್ತು. ಇದರ ಪ್ರಯೋಜನ ಬಡ ಜನರಿಗೆ ಸಿಗಬೇಕೆಂಬ ಉದ್ದೇಶದಿಂದ ಎಲ್ಸಿಯಾ ಟ್ರಸ್ಟ್ ಈ ಆಂಬುಲೆನ್ಸ್‌ನನ್ನು ಇಂದು ಕಾವೇರಿ ಆಸ್ಪತ್ರೆಗೆ ಹಸ್ತಾಂತರಿಸಿದೆ. 
ಈ ಕುರಿತು ಮಾತನಾಡಿದ ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಜಯ ಭಾಸ್ಕರನ್, ನಗರದಲ್ಲಿ ಎಷ್ಟೇ ಆಂಬುಲೆನ್ಸ‌ಗಳಿದ್ದರು ಆಂಬುಲೆನ್ಸ್‌ಗಳ ಬೇಡಿಕೆ ಹೆಚ್ಚುತ್ತಲೇ ಇದೆ. ಕೆಲವೊಮ್ಮೆ ಆಂಬುಲೆನ್ಸ್ ತಡವಾಗಿ ಬರುವುದರಿಂದ ರೋಗಿಯು ತಡವಾಗಿ ಆಸ್ಪತ್ರೆ ಸೇರುವ ಪರಿಸ್ಥಿತಿ ಇದೆ. ಕೆಲವೊಮ್ಮೆ ಪ್ರಾಣಕ್ಕೂ ಕುತ್ತಾಗುವ ಪರಿಸ್ಥಿತಿಯನ್ನು ನೋಡಿದ್ದೇವೆ. ಹೀಗಾಗಿ ಆಂಬುಲೆನ್ಸ್‌ನ  ಸಂಖ್ಯೆ ಹೆಚ್ಚಳವಾಗುವುದರಿಂದ ಶೀಘ್ರವಾಗಿ ಜನರಿಗೆ ಆಂಬುಲೆನ್ಸ್‌ ಲಭ್ಯವಾಗಲಿದೆ ಎಂದು ಅಭಿಪ್ರಾಯ ಪಟ್ಟರು. 
 
ಆಂಬುಲೆನ್ಸ್‌ನಲ್ಲಿ ಏನೇನಿದೆ?
ಇದೀಗ ಕಾವೇರಿ ಆಸ್ಪತ್ರೆಗೆ ಹಸ್ತಾಂತರಿಸಿರುವ ಈ ಆಂಬುಲೆನ್ಸ್ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದೆ. ಇದರಲ್ಲಿ ಕಾರ್ಡಿಯಾಕ್ ಅಟ್ಯಾಕ್ ಆದವರನ್ನು ಆಂಬುಲೆನ್ಸ್‌ನಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಕರೆದುಕೊಂಡು ಹೋಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ, ಆಕ್ಸಿಜನ್ ಸಿಲೆಂಡರ್ ಸೇರಿದಂತೆ ಮೊಬೈಲ್ ಐಸಿಯೂ ಮಾದರಿಯ ಎಲ್ಲಾ ರೀತಿ ತಂತ್ರಜ್ಞಾವನ್ನು ಸಹ ಇದರಲ್ಲಿ ಅಳವಿಡಿಸಿರುವುದು ವಿಶೇಷ. 
 
ಎಚ್‌ಪಿಇನ ರಾಜೇಶ್ ಧರ್ ಮಾತನಾಡಿ, ಆಂಬುಲೆನ್ಸ್ ವೈಶಿಷ್ಯತೆಗಳನ್ನು ವಿವರಿಸಿದರು. ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲಿನ ಜನರಿಗೆ ಉಚಿತವಾಗಿ ಈ ಆಂಬುಲೆನ್ಸ್ ಸೇವೆ ಸಲ್ಲಿಸಲಿದೆ, ಇದರ ಪ್ರಯೋಜನವನ್ನು ಇಲ್ಲಿನ ಜನರು ಪಡೆದುಕೊಳ್ಳಬಹುದು. ಇದಕ್ಕಾಗಿ ಕಾವೇರಿ ಆಸ್ಪತ್ರೆ ಹೆಲ್ಪ್‌ಲೈನ್ ಮೂಲಕ ಸಂಪರ್ಕಿಸಬಹುದು ಎಂದು ಹೇಳಿದರು. 
ಕಾರ್ಯಕ್ರಮದಲ್ಲಿ ಎಚ್‌ಪಿಇನ ಸೀತಾರಾಮ್ ಮತ್ತಿತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments