Select Your Language

Notifications

webdunia
webdunia
webdunia
webdunia

ನಗರದ‌ ಮೌರ್ಯ ಸರ್ಕಲ್ ನಲ್ಲಿ ಶವ ಯಾತ್ರೆ‌ಮಾಡುವ ಮೂಲಕ ವಿಬಿನ್ನವಾಗಿ‌ ಪತ್ರಿಭಟನೆ‌

ನಗರದ‌ ಮೌರ್ಯ ಸರ್ಕಲ್ ನಲ್ಲಿ ಶವ ಯಾತ್ರೆ‌ಮಾಡುವ  ಮೂಲಕ ವಿಬಿನ್ನವಾಗಿ‌ ಪತ್ರಿಭಟನೆ‌
bangalore , ಶುಕ್ರವಾರ, 20 ಆಗಸ್ಟ್ 2021 (20:23 IST)
ಕೇಂದ್ರ ಸರ್ಕಾರ ಅಡುಗೆ ಅನಿಲ‌ ಸಿಲಿಂಡರ್‌ಬೆಲೆಯನ್ನು‌ಏರಿಕೆ ಮಾಡಿರುವುದನ್ನು ವಿರೋದಿಸಿ ಇಂದು ಬೆಳಿಗ್ಗೆ ನಗರದ‌ ಮೌರ್ಯ ಸರ್ಕಲ್ ನಲ್ಲಿ ಶವ ಯಾತ್ರೆ‌ಮಾಡುವ  ಮೂಲಕ ವಿಬಿನ್ನವಾಗಿ‌ ಪತ್ರಿಭಟನೆ‌ ಆಮ್ಮ್ ಆದ್ಮಿ‌ಪಕ್ಷ  ಪ್ರತಿಭಟನೆ ನಡಸಲಾಯಿತು.
 
ಕಳ್ಳರು ಜನರ ಗಮನವನ್ನು ಬೇರೆಡೆಗೆ ಸೆಳೆದು ಜೇಬಿಗೆ ಕತ್ತರಿ ಹಾಕುವಂತೆ ಬಿಜೆಪಿಯವರು ಜನರ ಗಮನವನ್ನು ದೇವಸ್ಥಾನ, ಪಾಕಿಸ್ತಾನದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಟೀಕಿಸಿದರು
 “ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಶೇ. 50ರಷ್ಟು ಸಬ್ಸಿಡಿಯೊಂದಿಗೆ ಕೇವಲ 400 ರೂಪಾಯಿಗೆ ಅಡುಗೆ ಅನಿಲ ಸಿಲೆಂಡರ್‌ ಸಿಗುತ್ತಿತ್ತು. ಜನರು ಖರೀದಿಸುವಾಗಲೇ ಸಬ್ಸಿಡಿ ಮೊತ್ತವನ್ನು ಕಳೆದು ಮಾರಾಟ ಮಾಡಿದರೆ ಸಬ್ಸಿಡಿ ಕಡಿತಗೊಳಿಸುವುದು ಜನರ ಗಮನಕ್ಕೆ ಬರುತ್ತದೆ ಎಂದು ಯೋಚಿಸಿ ಮೋದಿ ಸರ್ಕಾರ, ಬ್ಯಾಂಕ್‌ ಖಾತೆಗೆ ಸಬ್ಸಿಡಿ ಮೊತ್ತವನ್ನು ಹಾಕಲು ಆರಂಭಿಸಿತು. ನಂತರ ಹಂತಹಂತವಾಗಿ ಸಬ್ಸಿಡಿ ಮೊತ್ತವನ್ನು 400ರಿಂದ ಸೊನ್ನೆಗೆ ಇಳಿಸಿತು. ಈಗ ಪದೇ ಪದೇ ಸಿಲಿಂಡರ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆಯಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.
 
ಬಡ ಹಾಗೂ ಮಧ್ಯಮ ವರ್ಗದವರು ಸಾಯುವಂತೆ ಮಾಡಿ, ಭಾರತದಲ್ಲಿ ಶ್ರೀಮಂತರನ್ನಷ್ಟೇ ಉಳಿಸಿಕೊಂಡು ಭಾರಭಾಗವಹಿಸಿದರಶ್ವಗುರು ಮಾಡಲು ಬಿಜೆಪಿ ನಿರ್ಧರಿಸಿದಂತಿದೆ. ಆದ್ದರಿಂದಲೇ ಬೆಲೆ ಏರಿಕೆ ಮಾಡಿ ಸಾಮಾನ್ಯ ಜನರ ಬದುಕನ್ನು ಹೈರಾಣಾಗಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ ಸಿಲಿಂಡರ್‌ ದರವನ್ನು ಬರೋಬ್ಬರಿ 265 ರೂಪಾಯಿ ಏರಿಕೆ ಮಾಡಲಾಗಿದೆ. ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಹಲವು ತಿಂಗಳುಗಳ ಕಾಲ ದುಡಿಮೆಯಿಲ್ಲದೇ ಜನರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ಸಬ್ಸಿಡಿ ನೀಡಿ ಅವರಿಗೆ ನೆರವಾಗಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಈಗ  ಬೆಲೆ ಏರಿಕೆ ಮಾಡಿ ಅವರ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಜಗದೀಶ್‌ ವಿ. ಸದಂ  ಸರ್ಕಾರದ‌ ವಿರುದ್ದ ಹರಿಹಾಯ್ದರು
Embarking on Vibinya

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಬರ್ಬರ ಹತ್ಯೆ