ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿಸಿದೆ ಮುಖ್ಯ ಆಯುಕ್ತರು ರವರಿಂದ ತುರ್ತು ಸಭೆ

Webdunia
ಶನಿವಾರ, 27 ನವೆಂಬರ್ 2021 (21:15 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ‌ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು‌ ನಿಯೋಜಿಸಿ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕಡ್ಡಾಯ ಪರೀಕ್ಷೆ ಮಾಡಬೇಕು ಎಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದಲ್ಲಿ ಕೋವಿಡ್ ಸೋಂಕು ಸಂಬಂಧಿಸಿದಂತೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಹೊರ ವಲಯ ಗಡಿ ಭಾಗದಲ್ಲಿ ಕೋವಿಡ್ ಪರೀಕ್ಷೆ ಮಾಡುವ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗಿದ್ದು, ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುನ್ನಚ್ಚರಿಕಾ ಕ್ರಮಗಳನ್ನು ವಹಸಿಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದಲ್ಲಿ‌ ಕಳೆದ ವಾರದಿಂದ ಸರಾಸರಿ 160 ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, 26 ರಂದು(ನಿನ್ನೆ) 224 ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಆನೇಕಲ್ ವ್ಯಾಪ್ತಿಯಲ್ಲಿ‌ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಆ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ನಗರದ ಯಾವ ಭಾಗದಲ್ಲೂ ಕ್ಲಸ್ಟರ್ ಗಳು ವರದಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ 63 ಕಂಟೈನ್ಮೆಂಟ್ ಜೋನ್ ಗಳಿದ್ದು, ಅವುಗಳ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಿನೋಮ್ ಸೀಕ್ವೆನ್ಸಿಂಗ್ ಮಾಡಿ ಬೇರೆ ಯಾವುದಾದರು ವೈರಾಣು ಪತ್ತೆಯಾಗಿದೆಯೆ ಎಂಬುದನ್ನು ಪರಿಶೀಲಿಸಿ ಎಂದು ತಿಳಿಸಿದರು.
 
ನಗರದಲ್ಲಿ ಇದುವರೆಗೆ ಒಟ್ಟು 1,38,06,027 ಡೋಸ್ ಲಸಿಕೆ ನೀಡಲಾಗಿದ್ದು, 80,69,986 ಮೊದಲ ಡೋಸ್(ಶೇ. 88 ರಷ್ಟು), 57,36,041 ಎರಡನೇ ಡೋಸ್(ಶೇ. 63 ರಷ್ಟು) ಲಸಿಕೆಯನ್ನು ನೀಡಲಾಗಿದೆ. ನಗರದಲ್ಲಿ ಲಸಿಕೆ ಪಡೆಯುವ ಸಂಬಂಧ ಆಟೋ ಗಳ ಮೂಲಕ ಧ್ವನಿವರ್ಧಗಳಲ್ಲಿ ಜಾಗೃತಿ ಮೂಡಿಸಬೇಕು. ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯನ್ನು ಹೆಚ್ಚಿಸಬೇಕು ಎಂದರು.
 
ಸಭೆಯಲ್ಲಿ ವಿಶೇಷ ಆಯುಕ್ತರು (ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಉಪ ಆರೋಗ್ಯಾಧಿಕಾರಿ ಡಾ. ಜಿ.ಕೆ.ಸುರೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments