ಅಧಿವೇಶನದ ನಂತರ ಪಕ್ಷ ಸಂಘಟನೆಗೆ ಒತ್ತು: ಕುಮಾರಸ್ವಾಮಿ

Webdunia
ಬುಧವಾರ, 15 ಸೆಪ್ಟಂಬರ್ 2021 (10:35 IST)
ಬೆಂಗಳೂರು : ವಿಧಾನಮಂಡಲ ಅಧಿವೇಶನ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಪ್ರವಾಸ, ಜಿಲ್ಲಾವಾರು ಸಭೆ ಸೇರಿ ಹಲವು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು. ಅಧಿವೇಶನದ ನಂತರ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎಂದು ನಿರ್ಧರಿಸಲಾಯಿತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಯವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಸಭೆಯ ನಂತರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಕುರಿತು ಚರ್ಚಿಸಲಾಗಿದೆ. ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಗೆ 125 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಇದೇ ತಿಂಗಳ 28 ಮತ್ತು 29 ರಂದು ಅವರಿಗೆ ಕಾರ್ಯಾಗಾರ ನಡೆಸಿ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯ ಟಾಸ್ಕ್ ನೀಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments