ದೊಡ್ಡಾನೆಕುಂದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಸೋಮವಾರ, 19 ಜೂನ್ 2023 (18:33 IST)
ಮಹದೇವಪುರ ವಲಯ ದೊಡ್ಡಾನೆಕುಂದಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂ. 24/1, 3, 4 ಮತ್ತು 5ರ ಫರ್ನ್ ಸಿಟಿಯಲ್ಲಿ ಹಾದುಹೋಗಿರುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಸುಮಾರು 200 ಮೀಟರ್ ಉದ್ದದ ರಾಜಕಾಲುವೆ ಮೇಲೆ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಕಾಂಪೌಂಡ್ ಗೋಡೆ, ಕ್ಲಬ್ ಹೌಸ್ ಕಟ್ಟಡ, ಸ್ವಿಮ್ಮಿಂಗ್ ಫೂಲ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್.ಟಿ.ಪಿ), ಕಟ್ಟಡ ಹಾಗೂ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. 
 
ಮುಂದುವರೆದು, ಫರ್ನ್ ಸಿಟಿ ನಂತರದ ಸ್ಥಳ ಸುಮಾರು 200 ಮೀಟರ್ ಉದ್ದದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದ ಖಾಲಿ ಸ್ಥಳ, ಗೌಡ್ರು ರಾಜಣ್ಣ ಹೋಟೆಲ್ ಶೆಡ್ ಅನ್ನು ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಇನ್ನು ಭಗಿನಿ ಹೋಟೆಲ್ ಅನ್ನು ತೆರವುಗೊಳಿಸಲು ಮುಂದಾದಾಗ ಹೋಟೆಲ್ ನವರೇ ಸ್ವಯಂ ತೆರವುಗೊಳಿಸಿಕೊಳ್ಳುವುದಾಗಿ ತಿಳಿಸಿದ್ದು, ಈ ಪೈಕಿ ತ್ವರಿತವಾಗಿ ತೆರವು ಮಾಡಲು ಅಧಿಕಾರಿಗಳು ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದರು. 
 
ಪಾಲಿಕೆ ಅಭಿಯಂತರರು, ಭೂಮಾಪಕರು, ತಹಶೀಲ್ದಾರ್ ರವರ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಸದರಿ ಸ್ಥಳದಲ್ಲಿ ಅಧಿಕಾರಿ/ಸಿಬ್ಬಂದಿಗಳ ಭದ್ರತೆಗಾಗಿ 40ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಿದ್ದು, 1 ಹಿಟಾಚಿ ಹಾಗೂ 10 ಗ್ಯಾಂಗ್ ಮ್ಯಾನ್ ಗಳ ಸಹಯೋಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ವಲಯ ಮುಖ್ಯ ಅಭಿಯಂತರರಾದ ಲೋಕೇಶ್ ರವರು ಮಾಹಿತಿ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments