ದೊಡ್ಡಾನೆಕುಂದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಸೋಮವಾರ, 19 ಜೂನ್ 2023 (18:33 IST)
ಮಹದೇವಪುರ ವಲಯ ದೊಡ್ಡಾನೆಕುಂದಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂ. 24/1, 3, 4 ಮತ್ತು 5ರ ಫರ್ನ್ ಸಿಟಿಯಲ್ಲಿ ಹಾದುಹೋಗಿರುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಸುಮಾರು 200 ಮೀಟರ್ ಉದ್ದದ ರಾಜಕಾಲುವೆ ಮೇಲೆ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಕಾಂಪೌಂಡ್ ಗೋಡೆ, ಕ್ಲಬ್ ಹೌಸ್ ಕಟ್ಟಡ, ಸ್ವಿಮ್ಮಿಂಗ್ ಫೂಲ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್.ಟಿ.ಪಿ), ಕಟ್ಟಡ ಹಾಗೂ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಲಾಗಿದೆ. 
 
ಮುಂದುವರೆದು, ಫರ್ನ್ ಸಿಟಿ ನಂತರದ ಸ್ಥಳ ಸುಮಾರು 200 ಮೀಟರ್ ಉದ್ದದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದ ಖಾಲಿ ಸ್ಥಳ, ಗೌಡ್ರು ರಾಜಣ್ಣ ಹೋಟೆಲ್ ಶೆಡ್ ಅನ್ನು ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಇನ್ನು ಭಗಿನಿ ಹೋಟೆಲ್ ಅನ್ನು ತೆರವುಗೊಳಿಸಲು ಮುಂದಾದಾಗ ಹೋಟೆಲ್ ನವರೇ ಸ್ವಯಂ ತೆರವುಗೊಳಿಸಿಕೊಳ್ಳುವುದಾಗಿ ತಿಳಿಸಿದ್ದು, ಈ ಪೈಕಿ ತ್ವರಿತವಾಗಿ ತೆರವು ಮಾಡಲು ಅಧಿಕಾರಿಗಳು ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದರು. 
 
ಪಾಲಿಕೆ ಅಭಿಯಂತರರು, ಭೂಮಾಪಕರು, ತಹಶೀಲ್ದಾರ್ ರವರ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಸದರಿ ಸ್ಥಳದಲ್ಲಿ ಅಧಿಕಾರಿ/ಸಿಬ್ಬಂದಿಗಳ ಭದ್ರತೆಗಾಗಿ 40ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಿದ್ದು, 1 ಹಿಟಾಚಿ ಹಾಗೂ 10 ಗ್ಯಾಂಗ್ ಮ್ಯಾನ್ ಗಳ ಸಹಯೋಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ವಲಯ ಮುಖ್ಯ ಅಭಿಯಂತರರಾದ ಲೋಕೇಶ್ ರವರು ಮಾಹಿತಿ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments