ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

Webdunia
ಸೋಮವಾರ, 30 ಜನವರಿ 2023 (19:58 IST)
ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, *ಇಂದು ಚಿನ್ನಪ್ಪನಹಳ್ಳಿ ಹಾಗೂ ಸಾದರಮಂಗಳ ಸೇರಿದಂತೆ ಒಟ್ಟು 4 ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.  ದೊಡ್ಡಾನೆಕುಂದಿ ವಾರ್ಡ್ನ ಚಿನ್ನಪ್ಪನಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ 3 ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಜಿ+2 ಕಟ್ಟಡವನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ. ಇನ್ನೆರಡು ಕಟ್ಟಡಗಳ ತೆರವು ಕಾರ್ಯಾಚರಣೆಯು ಪ್ರಗತಿಯಲ್ಲಿದ್ದು, ನಾಳೆ ಬಾಕಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಲಿದೆ. ಇನ್ನು ಹೂಡಿ ವಾರ್ಡ್ ಸಾದರ ಮಂಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 8 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ಇಂದು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಯ ವೇಳೆ 1 ಹಿಟಾಚಿ, 1 ಜೆಸಿಬಿ, 1 ಗ್ಯಾಸ್ ಕಟರ್, 1 ಟ್ರ್ಯಾಕ್ಟರ್, 10 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳದಲ್ಲಿ ಪಾಲಿಕೆಯ ಇಂಜಿನಿಯರ್ ಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments