Select Your Language

Notifications

webdunia
webdunia
webdunia
webdunia

ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಬೆದರಿಕೆ - ಡಿಕೆಶಿ

ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಬೆದರಿಕೆ - ಡಿಕೆಶಿ
ಮೈಸೂರು , ಗುರುವಾರ, 15 ಸೆಪ್ಟಂಬರ್ 2022 (20:45 IST)
ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಈ‌ ಬಗ್ಗೆ ಮಾತನಾಡಿದ ಡಿಕೆಶಿ  ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು.ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ.ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ.ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ ಎಂದಿದ್ದಾರೆ.
 
ಇನ್ನೂ ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ.
ನಾನು ಯಾವುದಕ್ಕೂ ಹೆದರುವವನಲ್ಲ.ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.
 
ಚಡ್ಡಿ, ಪ್ಯಾಂಟು, ಹಾಸಿಗೆ,ಮೊಟ್ಟೆ ಇತ್ಯಾದಿ ಇತ್ಯಾದಿ ಎಲ್ಲಾ ತನಿಖೆ ಮಾಡಲಿ.ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ.ಮೂರು ವರ್ಷ ಬೇಕಿತ್ತಾ ತನಿಖೆ ಆರಂಭಿಸಲು ?ಉತ್ತು, ಹಾರೆ ತೆಗೆದುಕೊಂಡು, ಬುಲ್ಡೋಜರ್‌ನಲ್ಲಿ ಅಗೆಯಲಿ, ಬೋರ್ ತೆಗೆಸಲಿ ನಮಗೇನು ಸಮಸ್ಯೆ ಇಲ್ಲ ಎಂದು ಮೈಸೂರಿನಲ್ಲಿ ಡಿ ಕೆ ಶಿವಕುಮಾರ್ ಹೇಳಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕ ಮಳೆಯಿಂದ ಆಲೂಗಡ್ಡೆ ತೋಟ ನಾಶ- ರೈತ ಕಂಗಾಲು