ಐಷಾರಾಮಿ ಬೈಕ್ ಕಳ್ಳತನ ಮಾಡುತ್ತಿದ್ದ ಎಂಜಿನೀರ್ ಅಂಡ್ ಗ್ಯಾಂಗ್ ಅರೆಸ್ಟ್

Webdunia
ಮಂಗಳವಾರ, 5 ಏಪ್ರಿಲ್ 2022 (17:57 IST)
ಬೆಂಗಳೂರಿನಲ್ಲಿ ಐಷರಾಮಿ ಬೈಕ್​ಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿಯಾಗಿರುವ ವಿಜಯ್, ಹೇಮಂತ್, ಗುಣಶೇಖರ್, ಪುರುಷೋತ್ತಮ್, ಭಾನು, ಕಿರಣ, ಕಾರ್ತಿಕ್ ಬಂಧಿತ ಆರೋಪಿಗಳಾಗಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಓದಿರುವ ವಿಜಯ್ ತನ್ನ ಸಹಚರರೊಂದಿಗೆ ಸೇರಿಕೊಂಡು ರಾಯಲ್​ ಎನ್​ಫೀಲ್ಡ್​​ ಬೈಕ್​ಗಳನ್ನೇ ಟಾರ್ಗೆಟ್​​ ಮಾಡುತ್ತಿದ್ದ.
ರಾತ್ರಿ 12ಗಂಟೆ ಬಳಿಕ ಬೈಕ್ ಇರುವ ಜಾಗಕ್ಕೆ ಹೋಗಿ ಲಾಕ್​ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ವಿಜಯ್​ ಮನೆಗೆ ತಂದು ಹೊಸ ಲಾಕ್​ ಜೋಡಿಸಿ ಆಂಧ್ರಪ್ರದೇಶಕ್ಕೆ ರೈಡ್​ ಹೋಗಿ ಅಲ್ಲಿ 30ರಿಂದ 40 ಸಾವಿರಕ್ಕೆ ಈ ಕದ್ದ ಬೈಕ್​ಗಳನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬೈಕ್​ ಕಳ್ಳತನವಾದ ಬಗ್ಗೆ ಬನಶಂಕರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ತನಿಖೆಗಿಳಿದ ಪೊಲೀಸರು ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ 27 ರಾಯಲ್​ ಎನ್​ಫೀಲ್ಡ್ , 3 ಪಲ್ಸರ್ ಹಾಗೂ ಆಕ್ಟೀವಾ ಬೈಕ್​ ಸೇರಿದಂತೆ ಒಟ್ಟು 31 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments