Webdunia - Bharat's app for daily news and videos

Install App

ಐಷಾರಾಮಿ ಬೈಕ್ ಕಳ್ಳತನ ಮಾಡುತ್ತಿದ್ದ ಎಂಜಿನೀರ್ ಅಂಡ್ ಗ್ಯಾಂಗ್ ಅರೆಸ್ಟ್

Webdunia
ಮಂಗಳವಾರ, 5 ಏಪ್ರಿಲ್ 2022 (17:57 IST)
ಬೆಂಗಳೂರಿನಲ್ಲಿ ಐಷರಾಮಿ ಬೈಕ್​ಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿಯಾಗಿರುವ ವಿಜಯ್, ಹೇಮಂತ್, ಗುಣಶೇಖರ್, ಪುರುಷೋತ್ತಮ್, ಭಾನು, ಕಿರಣ, ಕಾರ್ತಿಕ್ ಬಂಧಿತ ಆರೋಪಿಗಳಾಗಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಓದಿರುವ ವಿಜಯ್ ತನ್ನ ಸಹಚರರೊಂದಿಗೆ ಸೇರಿಕೊಂಡು ರಾಯಲ್​ ಎನ್​ಫೀಲ್ಡ್​​ ಬೈಕ್​ಗಳನ್ನೇ ಟಾರ್ಗೆಟ್​​ ಮಾಡುತ್ತಿದ್ದ.
ರಾತ್ರಿ 12ಗಂಟೆ ಬಳಿಕ ಬೈಕ್ ಇರುವ ಜಾಗಕ್ಕೆ ಹೋಗಿ ಲಾಕ್​ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ವಿಜಯ್​ ಮನೆಗೆ ತಂದು ಹೊಸ ಲಾಕ್​ ಜೋಡಿಸಿ ಆಂಧ್ರಪ್ರದೇಶಕ್ಕೆ ರೈಡ್​ ಹೋಗಿ ಅಲ್ಲಿ 30ರಿಂದ 40 ಸಾವಿರಕ್ಕೆ ಈ ಕದ್ದ ಬೈಕ್​ಗಳನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬೈಕ್​ ಕಳ್ಳತನವಾದ ಬಗ್ಗೆ ಬನಶಂಕರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ತನಿಖೆಗಿಳಿದ ಪೊಲೀಸರು ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ 27 ರಾಯಲ್​ ಎನ್​ಫೀಲ್ಡ್ , 3 ಪಲ್ಸರ್ ಹಾಗೂ ಆಕ್ಟೀವಾ ಬೈಕ್​ ಸೇರಿದಂತೆ ಒಟ್ಟು 31 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments