ಇಂಜಿನಿಯರಿಂಗ್ ಶುಲ್ಕ ಏರಿಕೆ: ವಿಚಾರ ಮಾಡ್ತೀವಿ ಎಂದು ಸಿದ್ದರಾಮಯ್ಯ ಸರ್ಕಾರ 10 ಶೇಕಡಾ ಏರಿಕೆಗೆ ಅಸ್ತು

Krishnaveni K
ಸೋಮವಾರ, 17 ಜೂನ್ 2024 (09:47 IST)
ಬೆಂಗಳೂರು: ಸಿಇಟಿ ಫಲಿತಾಂಶ ಬಂದ ಖುಷಿಯಲ್ಲಿ ಇಂಜಿನಿಯರಿಂಗ್ ಗೆ ಸೇರ್ಪಡೆಯಾಗಲು ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದೆ. ಪೇಮೆಂಟ್ ಸೀಟು ಅಲ್ಲದೆ, ಸರ್ಕಾರಿ ಕೋಟಾದಡಿ ಸಿಗುವ ಸೀಟಿನ ಶುಲ್ಕ ಕೂಡಾ ಈ ವರ್ಷದ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಬರೆದಿದ್ದು ಒಂದೆಡೆಯಾದರೆ ಪ್ರಶ್ನೆ ಪತ್ರಿಕೆ ಗೊಂದಲದಿಂದಾಗಿ ಕೆಲವರಿಗೆ ನಿರೀಕ್ಷಿತ ಅಂಕ ಬಂದಿಲ್ಲ ಎಂಬ ನಿರಾಸೆಯಲ್ಲಿದ್ದರು. ಇದರ ನಡುವೆ ಪೇಮೆಂಟ್ ಸೀಟಿನ ಶುಲ್ಕ ಕೇಳಿಕೊಂಡು ಹೋದ ಪೋಷಕರಿಗೆ ಖಾಸಗಿ ಕಾಲೇಜುಗಳು ಅಕ್ಷರಶಃ ಶಾಕ್ ಕೊಟ್ಟಿದ್ದರು. ಗ್ರಾಮೀಣ ಭಾಗದಲ್ಲೇ ಫೀಸ್ 4-5 ಲಕ್ಷ ರೂ. ತಲುಪಿತ್ತು.

ಇದರ ನಡುವೆ ಸರ್ಕಾರಿ ಕೋಟಾದಡಿ ಬರುವ ಇಂಜಿನಿಯರಿಂಗ್ ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇದರೊಂದಿಗೆ 96,574 ರೂ ಇದ್ದ ಫೀಸ್ 1,06, 231 ರೂ ಗೆ ಏರಿಕೆಯಾಗಿದೆ. ಈಗಾಗಲೇ ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿ ಬರುವ ಕಾಲೇಜುಗಳು ಬೇಕಾಬಿಟ್ಟಿ ಫೀಸ್ ವಸೂಲಿ ಮಾಡುತ್ತಿವೆ. ಇದರ ನಡುವೆ ಸರ್ಕಾರೀ ಫೀಸ್ ಕೂಡಾ ಹೆಚ್ಚಾಗಿದೆ.

ಇತ್ತೀಚೆಗಷ್ಟೇ ಖಾಸಗಿ ಕಾಲೇಜುಗಳ ಒಕ್ಕೂಟ 10-15 ಶೇಕಡಾ ಫೀಸ್ ಹೆಚ್ಚಳ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿತ್ತು. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಬಳಿ ಮಾಧ್ಯಮಗಳು ಪ್ರಶ್ನಿಸಿದಾಗ, ಇಲ್ಲ ನಾವು ವಿಚಾರ ಮಾಡ್ತೀವಿ ಎಂದಿದ್ದರು. ಆದರೆ ಸರ್ಕಾರವೇ ಈಗ 10 ಶೇಕಡಾ ಏರಿಕೆಗೆ ಅನುಮತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments