ಇಂಜಿನಿಯರಿಂಗ್ ವಿದ್ಯಾರ್ಥಿನಿಯದ್ದು ರೇಪ್ ಅಂಡ್ ಮರ್ಡರ್?

Webdunia
ಶುಕ್ರವಾರ, 19 ಏಪ್ರಿಲ್ 2019 (14:16 IST)
ಹಲವು ಅನುಮಾನಗಳಿಗೆ ಎಡೆ ಮಾಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಸಾವಿನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ.

ರಾಯಚೂರಿನಲ್ಲಿ ವಿದ್ಯಾರ್ಥಿನಿ ಮಧು ಪತ್ತಾರ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಬಂದಿದ್ದು, ಆತ್ಮಹತ್ಯೆ ಅಲ್ಲ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಎಫ್ ಐಆರ್ ದಾಖಲಿಸಲಾಗಿದೆ. ಹೆತ್ತವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಸುದರ್ಶನ ಯಾದವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆ ಕೈಗೊಂಡ ಪೊಲೀಸರು, ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಅದರ ಆಧಾರದಡಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಶವ ಪರೀಕ್ಷೆ ವರದಿ ಇನ್ನೂ ಬಂದಿಲ್ಲ ಎಂದು ನೇತಾಜಿ ಠಾಣೆ ಪಿಎಸ್ ಐ ತಿಳಿಸಿದ್ದಾರೆ.

ಇದು ಆತ್ಮಹತ್ಯೆಯಲ್ಲ ಕೊಲೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವೋದಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಎರಡು ದಿನಗಳಿಂದ ಹೋರಾಟ ನಡೆಸಿದ್ದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

ರಾಜ್ಯದ ಸರ್ಕಾರದ ಬಳಿ ದುಡ್ಡಿಲ್ಲ, ಅದಕ್ಕೇ ನೇಮಕಗಳೂ ಆಗ್ತಿಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್ ಎಷ್ಟೇ ಬಟ್ಟೆ ಬಿಚ್ಚಿಕೊಂಡ್ರೂ ವಿಬಿ ರಾಮ್ ಜಿ ಊರ್ಜಿತವಾಗುತ್ತದೆ: ಛಲವಾದಿ ನಾರಾಯಣಸ್ವಾಮಿ

ತೇಜಸ್ ವಿಮಾನದ ಪತನವನ್ನು ಸೂಚಿಸುವ ವರದಿ ಬಗ್ಗೆ ಎಚ್‌ಎಎಲ್‌ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments