Webdunia - Bharat's app for daily news and videos

Install App

ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಿಡ್ನಾಪ್ ಕೇಸ್ ಸುಖಾಂತ್ಯ

Webdunia
ಬುಧವಾರ, 19 ಏಪ್ರಿಲ್ 2017 (15:44 IST)
ಕಡಿಮೆ ಅವಧಿಯಲ್ಲಿ ಹಣಗಳಿಸಿ ಐಷಾರಾಮಿ ಜೀವನ ಸಾಗಿಸಲು ಪ್ರಿಯಕರನ ನೆರವಿನಿಂದ ತನ್ನ ಗೆಳತಿಯನ್ನೇ ಅಪಹರಿಸಿದ ವಿದ್ಯಾರ್ಥಿನಿಯೊಬ್ಬಳು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.  
 
ಬೆಳಗಾವಿಯ ಜಿಐಟಿ ಕಾಲೇಜಿನ 23 ವರ್ಷದ ವಿದ್ಯಾರ್ಥಿನಿ ಅರ್ಪಿತಾ ನಾಯಕ್ ಊಟಕ್ಕೆಂದು ಸ್ನೇಹಿತೆ ದಿವ್ಯಾ ಮಲಘಾಣ ಜೊತೆ ತೆರಳಿದ್ದರು, ಊಟ ಮಾಡುವ ಸಂದರ್ಭದಲ್ಲಿ ಎಳೆನೀರಲ್ಲಿ ನಿದ್ರೆ ಮಾತ್ರೆ ಬೆರಿಸಿದ್ದರು. ಅರ್ಪಿತಾ ನಿದ್ರೆಗೆ ಜಾರಿದಾಗ
 
ಆಕೆಯ ಮೂಗಿಗೆ ಕ್ಲೋರೋಫಾರ್ಮ್ ಒತ್ತಿ ಪ್ರಜ್ಞೆಯನ್ನು ತಪ್ಪಿಸಿದ್ದರು. ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದರು. ವಿದ್ಯಾರ್ಥಿನಿ ತಂದೆ ಬಳಿ 5 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
 
ಆರೋಪಿಗಳಾದ ದಿವ್ಯಾ ಮತ್ತು ಆಕೆಯ ಪ್ರಿಯತಮ ಕೇದಾರಿ, ಹಣ ನೀಡದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅರ್ಪಿತಾ ತಂದೆಗೆ ಎಚ್ಚರಿಕೆ ನೀಡಿದ್ದರು. ಅರ್ಪಿತಾ ಪ್ರಜ್ಞೆಗೆ ಮರಳಿದ ನಂತರ ಪೋಷಕರಿಗೆ ಕರೆ ಮಾಡಿ ತನ್ನ ಗೆಳತಿಯೇ ಅಪಹರಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಳು. 
 
ಅರ್ಪಿತಾ ಪೋಷಕರು ಟಿಳಕವಾಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆರೋಪಿಗಳಾದ ದಿವ್ಯಾ, ಕೇದಾರ್ ಮತ್ತು ಕಾರು ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments