ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಿಡ್ನಾಪ್ ಕೇಸ್ ಸುಖಾಂತ್ಯ

Webdunia
ಬುಧವಾರ, 19 ಏಪ್ರಿಲ್ 2017 (15:44 IST)
ಕಡಿಮೆ ಅವಧಿಯಲ್ಲಿ ಹಣಗಳಿಸಿ ಐಷಾರಾಮಿ ಜೀವನ ಸಾಗಿಸಲು ಪ್ರಿಯಕರನ ನೆರವಿನಿಂದ ತನ್ನ ಗೆಳತಿಯನ್ನೇ ಅಪಹರಿಸಿದ ವಿದ್ಯಾರ್ಥಿನಿಯೊಬ್ಬಳು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.  
 
ಬೆಳಗಾವಿಯ ಜಿಐಟಿ ಕಾಲೇಜಿನ 23 ವರ್ಷದ ವಿದ್ಯಾರ್ಥಿನಿ ಅರ್ಪಿತಾ ನಾಯಕ್ ಊಟಕ್ಕೆಂದು ಸ್ನೇಹಿತೆ ದಿವ್ಯಾ ಮಲಘಾಣ ಜೊತೆ ತೆರಳಿದ್ದರು, ಊಟ ಮಾಡುವ ಸಂದರ್ಭದಲ್ಲಿ ಎಳೆನೀರಲ್ಲಿ ನಿದ್ರೆ ಮಾತ್ರೆ ಬೆರಿಸಿದ್ದರು. ಅರ್ಪಿತಾ ನಿದ್ರೆಗೆ ಜಾರಿದಾಗ
 
ಆಕೆಯ ಮೂಗಿಗೆ ಕ್ಲೋರೋಫಾರ್ಮ್ ಒತ್ತಿ ಪ್ರಜ್ಞೆಯನ್ನು ತಪ್ಪಿಸಿದ್ದರು. ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದರು. ವಿದ್ಯಾರ್ಥಿನಿ ತಂದೆ ಬಳಿ 5 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
 
ಆರೋಪಿಗಳಾದ ದಿವ್ಯಾ ಮತ್ತು ಆಕೆಯ ಪ್ರಿಯತಮ ಕೇದಾರಿ, ಹಣ ನೀಡದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅರ್ಪಿತಾ ತಂದೆಗೆ ಎಚ್ಚರಿಕೆ ನೀಡಿದ್ದರು. ಅರ್ಪಿತಾ ಪ್ರಜ್ಞೆಗೆ ಮರಳಿದ ನಂತರ ಪೋಷಕರಿಗೆ ಕರೆ ಮಾಡಿ ತನ್ನ ಗೆಳತಿಯೇ ಅಪಹರಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಳು. 
 
ಅರ್ಪಿತಾ ಪೋಷಕರು ಟಿಳಕವಾಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆರೋಪಿಗಳಾದ ದಿವ್ಯಾ, ಕೇದಾರ್ ಮತ್ತು ಕಾರು ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments