Webdunia - Bharat's app for daily news and videos

Install App

ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶುರು

Webdunia
ಶುಕ್ರವಾರ, 14 ಜೂನ್ 2019 (14:42 IST)
ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ‌ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಯಾರೂ ಭಾವಿಸಬಾರದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ವಿಧಾನಸೌಧದ ಬ್ಯಾಂಕ್ಟೆಟ್‌ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ‌ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾತೃಭಾಷೆಯನ್ನು ರಕ್ಷಣೆ ಮಾಡುವ ಜೊತೆ ಜೊತೆಗೆ ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ತೆರೆಯಲಾಗಿದೆ.
ಪ್ರಸ್ತುತ ಸ್ಮರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಅವಶ್ಯಕ.‌

ಸರಕಾರಿ ಶಾಲೆ ಬಗ್ಗೆ ನಿರ್ಲಕ್ಷ್ಯ ಬೇಡ. ನಾವೆಲ್ಲರೂ ಸಹ ಸರಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದಿದ್ದು.
ಗೊಲ್ಲಹಳ್ಳಿ ಎಂಬ ಹಳ್ಳಿಯ ಸರಕಾರಿ ಶಾಲೆಯಲ್ಲಿ ಓದಿದ ನಾನು ಆಸ್ಟ್ರೇಲಿಯಾದಲ್ಲಿ ಡಾಕ್ಟರೇಟ್‌ ಮಾಡಿದ್ದೇನೆ.‌ ಸರಕಾರಿ ಶಾಲೆ ಎಂದೂ ನಿರ್ಲಕ್ಷ್ಯ ಆಗಬಾರದು ಎಂದರು. 

ಇಡೀ ದೇಶದಲ್ಲಿ ಕರ್ನಾಟಕ ಶಿಕ್ಷಣದಲ್ಲಿ ಮಾದರಿ ರಾಜ್ಯ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ 
1200 ಕೋಟಿ ರೂ.ಗಳನ್ನು ಸರಕಾರಿ ಶಾಲೆಗಳ ಆಧುನೀಕರಣಕ್ಕೆ ಮೀಸಲಿಟ್ಟಿದೆ. ನಮ್ಮ‌ಸರಕಾರದ ಆದ್ಯತೆ ಶಿಕ್ಷಣ ಕ್ಷೇತ್ರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ರೋಷನ್‌ ಬೇಗ್‌ ಇತರರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments