Webdunia - Bharat's app for daily news and videos

Install App

Karnataka By Election Result: ಬಿಜೆಪಿ ಸೋಲಿಗೆ ಈ ವ್ಯಕ್ತಿನೇ ಕಾರಣ ಎಂದ ಬಸನಗೌಡ ಪಾಟೀಲ್‌

Sampriya
ಶನಿವಾರ, 23 ನವೆಂಬರ್ 2024 (15:28 IST)
ಚಿಕ್ಕೋಡಿ: ಕರ್ನಾಟಕದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲು ಯಡಿಯೂರಪ್ಪ ಪುತ್ರ ವ್ಯಾಮೋಹವೇ ಕಾರಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.

ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ  ಅವರು, ಮುಂದಿನ ದಿನಗಳಾದರೂ ಹೈಕಮಾಂಡ್ ಈ ವಿಚಾರವಾಗಿ ಗಂಭೀರ ಚರ್ಚೆ ಮಾಡಬೇಕು.  ಈ ಚುನಾವಣೆ ಫಲಿತಾಂಶದ ಮೂಲಕ ಏನೂ ತಿಳಿದುಕೊಳ್ಳಬೇಕಾದರೆ ವಿಜಯೇಂದ್ರ ಅವರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಹರಿಹಾಯ್ದರು.

ಇನ್ನೂ ಭರತ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಮತ್ತು ಬಿಜೆಪಿಗೆ ಬೇಕಿ

ಬಿಜೆಪಿಯಲ್ಲಿ ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಅವರು ಈ ವಿಚಾರವಾಗಿ ಕೊನೆಯವರೆಗೂ ಕಾದಿದ್ದರು.  ಜನ ಯೋಗೇಶ್ವರ್ ಕೆಲಸ ಮಾಡಿದ್ದನ್ನು ನೋಡಿ ಗೆಲುವು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಯೋಚನೆ ಮಾಡಿ ಪಕ್ಷ ಸಂಘಟನೆ ಮಾಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments