Select Your Language

Notifications

webdunia
webdunia
webdunia
webdunia

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

projects cm bommai shivamogga ಶಿವಮೊಗ್ಗ ಸಿಎಂ ಬೊಮ್ಮಾಯಿ ಯೋಜನೆಗಳು
bengaluru , ಬುಧವಾರ, 20 ಏಪ್ರಿಲ್ 2022 (17:04 IST)

50 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ಉನ್ನತಾಧಿಕಾರಿಗಳು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ತಾಂತ್ರಿಕ ಅಧ್ಯಯನ ಸಂಸ್ಥೆಗಳನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ಸಮಿತಿಯನ್ನು ಕೆಟಿಪಿ ಕಾಯ್ದೆಯನ್ವಯ ರಚಿಸಲಾಗಿದೆ. ಸಮಿತಿಯು ಕಾಮಗಾರಿಯ ಅಂದಾಜು ಮೊತ್ತ, ಕೆಟಿಟಿಪಿಯನ್ವಯ ಟೆಂಡರ್ ನಿಯಮಗಳು ಇವುಗಳನ್ನು ಪರಿಶೀಲಿಸಿದ ನಂತರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಬೇಕು. ಈ ಸಮಿತಿಯು ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ಸರ್ಕಾರದ ಎಲ್ಲ ಇಲಾಖೆಗಳ 50 ಕೋಟಿ ರೂ. ಮೀರಿದ ಟೆಂಡರ್ಗಳಿಗಾಗಿ ಈ ನಿಯಮ ಜಾರಿಯಲ್ಲಿದೆ. ಟೆಂಡರ್‌ಗಳು ಹೆಚ್ಚಾದ ಸಂದರ್ಭದಲ್ಲಿ ಟೆಂಡರ್ ಪರಿಶೀಲನೆಗೆ ಅನುಕೂಲವಾಗುವಂತೆ ಪರ್ಯಾಯ ಸಮಿತಿಯನ್ನು ಶೀಘ್ರವಾಗಿ ರಚಿಸಲಾಗಿದೆ ಎಂದು ಅವರು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಜನರು ಮಾಸ್ಕ್‌ ಹಾಕುತ್ತಲೇ ಇಲ್ಲ: ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ