Webdunia - Bharat's app for daily news and videos

Install App

ಸದ್ಯಕ್ಕೆ ರಾಜಕೀಯ ಪ್ರವೇಶವಿಲ್ಲ: ಸಿಎಂ ಸಿದ್ದು ಪುತ್ರ ಯತೀಂದ್ರ ಸ್ಪಷ್ಟನೆ

Webdunia
ಸೋಮವಾರ, 29 ಆಗಸ್ಟ್ 2016 (16:57 IST)
ಸದ್ಯಕ್ಕೆ ರಾಜಕೀಯ ಪ್ರವೇಶಿಸುವ ಯಾವುದೇ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸ್ಪಷ್ಟಪಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಅಣ್ಣ ರಾಕೇಶ್ ಅವರ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತೇನೆ. ಮೈಸೂರಿನಲ್ಲಿ 2-3 ದಿನಗಳ ಕಾಲ ವಾಸ್ತವ್ಯ ಹೂಡಿ, ಜನರ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಅವರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಶೀಘ್ರದಲ್ಲಿ ರಾಜಕೀಯ ಪ್ರವೇಶಿಸುವ ಯಾವುದೇ ಇರಾದೆಯಿಲ್ಲ. ಉಹಾಪೋಹ ಸುದ್ದಿಗಳತ್ತ ಗಮನಹರಿಸಬೇಡಿ. ರಾಜಕೀಯ ಪ್ರವೇಶಿಸುವ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ ಪುತ್ರ ರಾಕೇಶ್ ಅವರ ಅಕಾಲಿಕ ನಿಧನದಿಂದಾಗಿ ಸಿಎಂ ಕುಟುಂಬ ಮತ್ತು ಮೈಸೂರು ಕಾಂಗ್ರೆಸ್ ಘಟಕದಲ್ಲಿ ನಿರಾಸೆಯ ಅಲೆ ಮೂಡಿಸಿತ್ತು. ಇದೀಗ ಡಾ.ಯತೀಂದ್ರ ಸಹೋದರ ರಾಕೇಶ್ ಸ್ಥಾನವನ್ನು ತುಂಬಲಿದ್ದಾರೆ ಎನ್ನುವ ಸಂತಸ ಕಾಂಗ್ರೆಸ್ ವಲಯದಲ್ಲಿ ಹರಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments