Webdunia - Bharat's app for daily news and videos

Install App

ರಾಜ್ಯದಲ್ಲಿ ಸಾಂಕ್ರಾಮಿಕ ರೋಗ: ಹಲವು ಜಿಲ್ಲೆಗಳಲ್ಲಿ ಮಲೇರಿಯಾ, ಚಿಕನ್ ಗುನ್ಯಾ, ಡೆಂಘಿ ಪ್ರಕರಣ ಪತ್ತೆ

Webdunia
ಭಾನುವಾರ, 25 ಜೂನ್ 2017 (11:10 IST)
ಬೆಂಗಳೂರು: ಮಲೇರಿಯಾ, ಚಿಕನ್ ಗುನ್ಯಾ, ಡೆಂಘಿ, ಹೆಚ್1-ಎನ್1 ಸೇರಿದಂತೆ ರಾಜ್ಯದ ಹಲವೆಡೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಗಿದೆ.
 
ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರಿನಲ್ಲಿ ತಲಾ ಇಬ್ಬರು, ಮೈಸೂರು, ಬಳ್ಳಾರಿ, ಉತ್ತರ ಕನ್ನಡ,ಬೆಳಗಾವಿ, ತುಮಕೂರು, ಕೋಲಾರ ಹಾಗೂ ಚಿತ್ರದುರ್ಗದಲ್ಲಿ ತಲಾ ಒಬ್ಬರು ಎಚ್‌1-ಎನ್‌1ನಿಂದ ಮೃತರಾಗಿದ್ದಾರೆ.  ಹಾಗೆಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ 819, ಬೆಂಗಳೂರು ನಗರದಲ್ಲಿ 198, ಮೈಸೂರಿನಲ್ಲಿ 257, ಉಡುಪಿಯಲ್ಲಿ 151, ಶಿವಮೊಗ್ಗದಲ್ಲಿ 137 ಸೇರಿದಂತೆ ರಾಜ್ಯದಲ್ಲಿ 2211 ಮಂದಿ  ಎಚ್‌1-ಎನ್‌1 ಜ್ವರದಿಂದ ಬಳಲುತ್ತಿದ್ದಾರೆ.
 
ಆರೋಗ್ಯ ಇಲಾಖೆಯಿಂದ ಈ ವರ್ಷ 6,939 ಮಂದಿಯ ರಕ್ತ ಪರೀಕ್ಷೆ ಮಾಡಿದ್ದು, ಅದರಲ್ಲಿ 1,512 ಮಂದಿಗೆ ಡೇಂಘಿ ಸೋಂಕು ಇರುವುದು ದೃಢಪಟ್ಟಿದೆ. ದಾವಣಗೆರೆಯಲ್ಲಿ 138, ಮೈಸೂರಿನಲ್ಲಿ 170, ಉಡುಪಿಯಲ್ಲಿ 149, ಮಂಡ್ಯದಲ್ಲಿ 102, ಚಿತ್ರದುರ್ಗದಲ್ಲಿ 95 ಪ್ರಕರಣಗಳು ದಾಖಲಾಗಿವೆ. ಚಿಕನ್ ಗುನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ 2,374 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 304 ಮಂದಿಗೆ ಚಿಕನ್‌ಗುನ್ಯಾ ಇರುವುದು ಸಾಬೀತಾಗಿದೆ. ಚಾಮರಾನಗರದಲ್ಲಿ 54, ಚಿತ್ರದುರ್ಗದಲ್ಲಿ 51, ತುಮಕೂರಿನಲ್ಲಿ 37, ಮಂಡ್ಯದಲ್ಲಿ 36 ಹೀಗೆ ವಿವಿಧ ಜಿಲ್ಲೆಗಳಲ್ಲಿ ಐದಾರು ಪ್ರಕರಣ ಪತ್ತೆಯಾಗಿದೆ.
 
ಮಲೇರಿಯಾಗೆ ಸಂಬಂಧಿಸಿದಂತೆ ಈ ವರ್ಷ 37,68,673 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದ್ದು, 1,672 ಮಂದಿಗೆ ಮಲೇರಿಯಾ ಇರುವುದು ದೃಢಪಟ್ಟಿದೆ. ಅದರಲ್ಲಿ ಉಡುಪಿ ಜಿಲ್ಲೆಯಲ್ಲಿ  111, ದಕ್ಷಿಣ ಕನ್ನಡದಲ್ಲಿ 1046, ಗದಗದಲ್ಲಿ  65, ಕೊಪ್ಪಳದಲ್ಲಿ 59, ಬಾಲಕೋಟೆಯಲ್ಲಿ 50 ಸೋಂಕಿರುವ ಪ್ರಕರಣದ ಪತ್ತೆಯಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments