ಬೋಟ್ ಇಂಜಿನ್ ನಲ್ಲಿ ದೋಷ : ಅದರಲ್ಲಿದ್ದವರ ಪಾಡು ಏನಾಯಿತು?

Webdunia
ಬುಧವಾರ, 18 ಸೆಪ್ಟಂಬರ್ 2019 (14:59 IST)
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಕರ್ನಾಟಕ ಮೂಲದ ಎನ್ಎಸ್ ಜಿ ಎಂಬ ಹೆಸರಿನ ಬೋಟ್ ಸಮುದ್ರ ನಡುವೆ ತಾಂತ್ರಿಕ ದೋಷಕ್ಕೆ ಒಳಗಾಗಿದೆ.

ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಮೀನುಗಾರಿಕಾ ಬೋಟ್ ಹಾಗೂ ಅದರಲ್ಲಿದ್ದ 23 ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಕರ್ನಾಟಕ ಮೂಲದ ಎನ್ಎಸ್ ಜಿ ಎಂಬ ಹೆಸರಿನ ಬೋಟ್ ಭಟ್ಕಳ ಸಮೀಪದ ಸಮುದ್ರ ತೀರದಿಂದ ಸುಮಾರು 30 ನಾಟಿಕಲ್ ಮೈಲು ದೂರದಲ್ಲಿರೋ ಮಾವಿನಕುರ್ಲೆ ಎಂಬಲ್ಲಿ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು.

ಈ ಮೀನುಗಾರಿಕಾ ಬೋಟ್ ನಲ್ಲಿ 23 ಮಂದಿ ಮೀನುಗಾರರಿದ್ದರು. ಮೀನುಗಾರಿಕಾ ಬೋಟ್ ಅಪಾಯದಲ್ಲಿರುವ ಬಗ್ಗೆ ಮಾಹಿತಿಯನ್ನು ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಕೋಸ್ಟ್ ಗಾರ್ಡ್ ಶಿಫ್ ರಾಜದೂತ್ ಗೆ ನೀಡಲಾಗಿತ್ತು. ಕೂಡಲೇ ಕಾರ್ಯಾಚರಣೆಗೆ ಇಳಿದ ಕೋಸ್ಟ್ ಗಾರ್ಡ್ ಶಿಫ್ ರಾಜದೂತ್, ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್ ನ ತಾಂತ್ರಿಕ ದೋಷ ಸರಿಪಡಿಸಲು ಪ್ರಯತ್ನಿಸಿದೆ.

ಆದರೆ ಇಂಜಿನ್ ತಾಂತ್ರಿಕ ದೋಷ ಸರಿಯಾಗದ ಕಾರಣ ಬೋಟ್ ನಲ್ಲಿದ್ದ 23 ಮಂದಿ ಮೀನುಗಾರರನ್ನು ರಕ್ಷಿಸಿದೆ. ನಂತರ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ ಮತ್ತೊಂದು ಮೀನಗಾರಿಕಾ ಬೋಟ್ ಪವನಸುತ ಮೂಲಕ ಇಂಜಿನ್ ವೈಫಲ್ಯ ಹೊಂದಿದ ಬೋಟ್ ನ್ನು ಭಟ್ಕಳ ಸಮುದ್ರ ತೀರಕ್ಕೆ ತರಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments