Webdunia - Bharat's app for daily news and videos

Install App

ಸರ್ಕಾರ ಸಕಾಲಕ್ಕೆ ಹಣ ಕೊಡದಿದ್ದರೆ ಗೃಹಜ್ಯೋತಿ ಹಣ ಜನರಿಂದಲೇ ಕಿತ್ತುಕೊಳ್ಳಲು ಮುಂದಾದ ಎಸ್ಕಾಂಗಳು

Krishnaveni K
ಸೋಮವಾರ, 24 ಫೆಬ್ರವರಿ 2025 (09:59 IST)
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಸಕಾಲಕ್ಕೆ ಹಣ ಕೊಡದೇ ಇದ್ದರೆ ಗೃಹಜ್ಯೋತಿ ಹಣವನ್ನು ಜನರಿಂದಲೇ ವಸೂಲಿ ಮಾಡಲು ಅವಕಾಶ ಕೊಡಿ ಎಂದು ಎಸ್ಕಾಂಗಳು ಸರ್ಕಾರಕ್ಕೆ ಮನವಿ ಮಾಡಿದೆ ಎಂದು ತಿಳಿದುಬಂದಿದೆ.

ಗೃಹಜ್ಯೋತಿ ಯೋಜನೆಯಡಿ ಜನರಿಗೆ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಇದರ ಪರವಾಗಿ ಸರ್ಕಾರವೇ ವಿದ್ಯುತ್ ಆಯೋಗಕ್ಕೆ ಹಣ ಪಾವತಿ ನೀಡಬೇಕು. ಆದರೆ ಸಕಾಲಕ್ಕೆ ಹಣ ಪಾವತಿಯಾಗುತ್ತಿಲ್ಲ ಎಂಬ ಆಕ್ಷೇಪ ಬಂದಿದೆ.

ಗೃಹಜ್ಯೋತಿ ಸಬ್ಸಿಡಿ ಪ್ರಯುಕ್ತ ನೀಡಬೇಕಾಗಿರುವ ಹಣವನ್ನು ಸರ್ಕಾರ ಮುಂಗಡವಾಗಿ ನೀಡಬೇಕು.ಇಲ್ಲದೇ ಹೋದರೆ ಜನರಿಂದಲೇ ಹಣ ವಸೂಲಿ ಮಾಡಲು ಅವಕಾಶ ನೀಡಬೇಕು ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಸ್ಕಾಂಗಳು ಮನವಿ ಮಾಡಿವೆ.

ಒಂದು ವೇಳೆ ಸರ್ಕಾರ ಮುಂಗಡ ಹಣ ನೀಡದೇ ಇದ್ದರೆ ಗೃಹಜ್ಯೋತಿ ಫಲಾನುಭವಿಗಳಿಗೆ ವಿದ್ಯುತ್ ಬಿಲ್ ನೀಡಲಾಗುತ್ತದೆ. ಮೊದಲು ಎಸ್ಕಾಂಗಳಿಗೆ ವಿದ್ಯುತ್ ಬಿಲ್ ಪಾವತಿ ಮಾಡಿ ಬಳಿಕ ಸರ್ಕಾರದಿಂದ ಅದನ್ನು ಕ್ಲೈಮ್ ಮಾಡಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದಲ್ಲಿ ಜನರಿಗೆ ಮೊದಲು ವಿದ್ಯುತ್ ಬಿಲ್ ಪಾವತಿ ಮಾಡುವುದು ಅದನ್ನು ಸರ್ಕಾರದಿಂದ ಕ್ಲೈಮ್ ಮಾಡಿಕೊಳ್ಳುವುದು ಹೆಚ್ಚುವರಿ ತಲೆನೋವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments