Webdunia - Bharat's app for daily news and videos

Install App

ಈಶ್ವರಪ್ಪಗೆ ಕಜಕಿಸ್ತಾನದಿಂದ ಬೆದರಿಕೆ ಕರೆ

Webdunia
ಸೋಮವಾರ, 15 ಮೇ 2023 (20:40 IST)
ನಿನ್ನೆ ರಾತ್ರಿ ನನಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿನ್ನೆ ರಾತ್ರಿ ನಾನು ಮೊಬೈಲ್​​​ ಸೈಲೆಂಟ್ ಮಾಡಿ ಮಲಗಿದ್ದೆ. ನನಗೆ ಮಿಸ್ಡ್ ಕಾಲ್ ಬಂದಿದೆ. ಕಜಕಿಸ್ತಾನದಿಂದ ವಾಟ್ಸಪ್ ಕಾಲ್ ಬಂದಿದೆ ಎಂದು ತಿಳಿಸಿದ್ರು. ಇದು ಹೇಡಿಗಳು ಮಾಡುವ ಕೆಲಸ. ಈ ಸಂಬಂಧ ನಾನು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡುತ್ತಿದ್ದೇನೆ. ಜೈಲಿನಲ್ಲಿರುವಂತಹ ವ್ಯಕ್ತಿಯ ಡೈರಿಯಲ್ಲಿ ನನ್ನ ಹೆಸರು ಉಲ್ಲೇಖವಾಗಿತ್ತು. NIA ಅಧಿಕಾರಿಗಳು ತನಿಖೆ ನಡೆಸುವ ವೇಳೆ ಈ ಬಗ್ಗೆ ಬಹಿರಂಗವಾಗಿತ್ತು. ನಿನ್ನೆ ರಾತ್ರಿ ನನಗೆ ಬೆದರಿಕೆ ಕರೆ ಮತ್ತೆ ಬಂದಿದೆ ಎಂದು ತಿಳಿಸಿದ್ರು. ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿತ್ತು. ಈ ಬಗ್ಗೆ NIA ತನಿಖೆ ಮಾಡಿತ್ತು. ಸಾಹಿಲ್ ಶೇಖ್ ಎಂಬಾತನ ಬಂಧನವಾಗಿತ್ತು. ಆಗ ನನಗೂ ಬೆದರಿಕೆ ಇರುವುದು ಗೊತ್ತಾಗಿದೆ ಎಂದು ತಿಳಿಸಿದ್ರು. ರಾಷ್ಟ್ರ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಬೆಳಗಾವಿಯ ಟಿಳಕವಾಡಿ ಠಾಣೆಯಲ್ಲಿ ಸುಮೊಟೊ ದೂರು ದಾಖಲಾಗಿದೆ. ಶಿರಸಿಯಲ್ಲೂ ಹಸಿರು ಧ್ವಜ ಹಾರಾಟವಾಗಿದೆ. ಪಾಕ್ ಪರ ಏಜೆಂಟರು ನಮ್ಮ ರಾಜ್ಯದಲ್ಲಿ ಚಿಗುರೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಮುಂದಿನ ಸುದ್ದಿ
Show comments