Webdunia - Bharat's app for daily news and videos

Install App

ಮಾಧ್ಯಮದವರ ಮೇಲೆ ಕಿಡಿಕಾರಿದ ಈಶ್ವರಪ್ಪ

Webdunia
ಸೋಮವಾರ, 4 ಡಿಸೆಂಬರ್ 2017 (17:50 IST)
ಬಿಜೆಪಿಯಲ್ಲಿ ಭಿನ್ನಮತದ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರ ಮೇಲೆ ಕಿಡಿಕಾರಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಮಾಧ್ಯಮದವರಿಗೆ ಬೇರೆ ಕೆಲಸವಿಲ್ಲ. ಬೆಂಕಿ ಹಚ್ಚುವ ಕೆಲಸ ಮಾಡುತ್ತೀರಾ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಹೆಚ್ಚಾಗಿ ಕಾಣಿಸದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಭಿನ್ನಮತ ಇದೆಯೇ ಎಂದು ಮಾಧ್ಯಮದವರು ಕೇಳಿದ್ದಕ್ಕೆ ಗರಂ ಆದ ಈಶ್ವರಪ್ಪ ರಾಜಕಾರಣಿಗಳನ್ನು ಮಾಧ್ಯಮದವರು ಮೀರಿಸುತ್ತೀರಿ ಎಂದಿದ್ದಾರೆ.

ಮನೆಯಲ್ಲಿ ಜಗಳ ನಡೆಯುವುದಿಲ್ಲವೇ? ಜಗಳ ಯಾಕೆ ಅಂತ ಕೇಳಿದ್ರೆ ಏನು ಹೇಳಬೇಕು. ಕುಟುಂಬದಲ್ಲಿ ಇಂತಹದ್ದೆಲ್ಲ ಸಾಮಾನ್ಯ, ಕುಟುಂಬದವರು ಕೂತುಕೊಂಡು ಬಗೆಹರಿಸಿಕೊಳ್ಳುತ್ತೇವೆ ಎಂದ ಅವರು ಮಾಧ್ಯಮದವರ ಮೇಲೆ ಕೆಂಡಾಮಂಡಲರಾಗಿದ್ದಾರೆ. 

ಬೆಳಗಾವಿ ಅಧಿವೇಶನದ ಸಂದರ್ಭದಲ್ಲೂ ಆರೋಗ್ಯ ಸರಿ ಇರಲಿಲ್ಲ. ಈಗಲೂ ಆರೋಗ್ಯ ಸುಧಾರಿಸಿಲ್ಲ. ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ದಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments