ಮಾಧ್ಯಮದವರ ಮೇಲೆ ಕಿಡಿಕಾರಿದ ಈಶ್ವರಪ್ಪ

Webdunia
ಸೋಮವಾರ, 4 ಡಿಸೆಂಬರ್ 2017 (17:50 IST)
ಬಿಜೆಪಿಯಲ್ಲಿ ಭಿನ್ನಮತದ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರ ಮೇಲೆ ಕಿಡಿಕಾರಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಮಾಧ್ಯಮದವರಿಗೆ ಬೇರೆ ಕೆಲಸವಿಲ್ಲ. ಬೆಂಕಿ ಹಚ್ಚುವ ಕೆಲಸ ಮಾಡುತ್ತೀರಾ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಹೆಚ್ಚಾಗಿ ಕಾಣಿಸದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಭಿನ್ನಮತ ಇದೆಯೇ ಎಂದು ಮಾಧ್ಯಮದವರು ಕೇಳಿದ್ದಕ್ಕೆ ಗರಂ ಆದ ಈಶ್ವರಪ್ಪ ರಾಜಕಾರಣಿಗಳನ್ನು ಮಾಧ್ಯಮದವರು ಮೀರಿಸುತ್ತೀರಿ ಎಂದಿದ್ದಾರೆ.

ಮನೆಯಲ್ಲಿ ಜಗಳ ನಡೆಯುವುದಿಲ್ಲವೇ? ಜಗಳ ಯಾಕೆ ಅಂತ ಕೇಳಿದ್ರೆ ಏನು ಹೇಳಬೇಕು. ಕುಟುಂಬದಲ್ಲಿ ಇಂತಹದ್ದೆಲ್ಲ ಸಾಮಾನ್ಯ, ಕುಟುಂಬದವರು ಕೂತುಕೊಂಡು ಬಗೆಹರಿಸಿಕೊಳ್ಳುತ್ತೇವೆ ಎಂದ ಅವರು ಮಾಧ್ಯಮದವರ ಮೇಲೆ ಕೆಂಡಾಮಂಡಲರಾಗಿದ್ದಾರೆ. 

ಬೆಳಗಾವಿ ಅಧಿವೇಶನದ ಸಂದರ್ಭದಲ್ಲೂ ಆರೋಗ್ಯ ಸರಿ ಇರಲಿಲ್ಲ. ಈಗಲೂ ಆರೋಗ್ಯ ಸುಧಾರಿಸಿಲ್ಲ. ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ದಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments