ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತ

geetha
ಮಂಗಳವಾರ, 5 ಮಾರ್ಚ್ 2024 (19:00 IST)
ಬೆಂಗಳೂರು-ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ ಎಂದು ತಿಳಿಸಿದೆ.
 
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ.
 
ನಗರದ ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರಿನಲ್ಲಿ ಸೇವೆ ಸ್ಥಗಿತವಾಗಲಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments