Webdunia - Bharat's app for daily news and videos

Install App

ಲೋಕಸಭೆ ಚುನಾವಣೆಯಲ್ಲಿ ಅಗತ್ಯ ಸೇವೆ: 12 ಇಲಾಖೆ ಸಿಬ್ಬಂದಿಗೆ ಸಿಗಲಿದೆ ಅಂಚೆ ಮತದಾನದ ಅವಕಾಶ

Sampriya
ಬುಧವಾರ, 20 ಮಾರ್ಚ್ 2024 (14:04 IST)
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹನ್ನೆರಡು ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
 
ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ ಸೆಲ್ವಮಣಿ ಅವರು, ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಲು ಆಯಾ ಇಲಾಖೆಗಳಿಂದ ಪಟ್ಟಿ ತಿಳಿಸಿದ್ದಾರೆ.
 
12 ವಿವಿಧ ಇಲಾಖೆಗಳನ್ನು ಚುನಾವಣಾ ಆಯೋಗವು ಅಗತ್ಯ ಸೇವೆಗಳೆಂದು ಪರಿಗಣಿಸಿದೆ. ಅವರು ಅಂಚೆ ಮತದಾನಕ್ಕೆ ಅರ್ಹರಾಗಿದ್ದಾರೆ. ಎವಿಇಎಸ್‌ ಅಡಿಯಲ್ಲಿ ಅರ್ಹ ಮತದಾರರು ಫಾರ್ಮ್ 12ಡಿ ಅನ್ನು ಭರ್ತಿ ಮಾಡಬೇಕಾಗುತ್ತದೆ ಮತ್ತು ಶುಕ್ರವಾರದೊಳಗೆ (ಮಾರ್ಚ್ 22) ಸಲ್ಲಿಸಬೇಕು ಎಂದು ಹೇಳಿದರು. 
 
ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತದಾನ ಕೇಂದ್ರದಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಅಂಚೆ ಮತಪತ್ರಗಳನ್ನು ಅಂಚೆ ಮೂಲಕ ವಿತರಿಸುವ/ ತಲುಪಿಸುವ ವ್ಯವಸ್ಥೆ ಇರುವುದಿಲ್ಲ ಎಂದು ಅವರು ತಿಳಿಸಿದರು.
 
ಅಂಚೆ ಮತದಾನಕ್ಕೆ ಅರ್ಹರು: ಬೆಸ್ಕಾಂ, ಬಿ.ಎಸ್.ಎನ್.ಎಲ್, ರೈಲ್ವೆ ಇಲಾಖೆ, ಮಾಹಿತಿ ಇಲಾಖೆ, ಆಲ್ ಇಂಡಿಯಾ ರೇಡಿಯೋ, ಆರೋಗ್ಯ ಇಲಾಖೆ, ವಾಯುಯಾನ, ರಸ್ತೆ ಸಾರಿಗೆ ನಿಗಮ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಮತದಾನದ ದಿನದಂದು ಚುನಾವಣಾ ಪ್ರಸಾರಕ್ಕಾಗಿ ಭಾರತದ ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದ ಮಾಧ್ಯಮ ವ್ಯಕ್ತಿಗಳು, ಸಂಚಾರ ಪೊಲೀಸ್, ಆಂಬ್ಯುಲೆನ್ಸ್ ಸೇವೆಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ಮುಂದಿನ ಸುದ್ದಿ
Show comments