Select Your Language

Notifications

webdunia
webdunia
webdunia
webdunia

ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ : ಜಿ.ಪರಮೇಶ್ವರ್

ಕೋಮು
ಮಂಗಳೂರು , ಗುರುವಾರ, 8 ಜೂನ್ 2023 (12:42 IST)
ಮಂಗಳೂರು : ನೈತಿಕ ಪೊಲೀಸ್ ಗಿರಿ ತಡೆಯಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ಕೋಮು ದ್ವೇಷ ನಿಗ್ರಹ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
 
ಮಂಗಳೂರಿನಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂದು ಇಡೀ ದೇಶವೇ ನಂಬಿದೆ.

ಅದರ ಜೊತೆಗೆ ಇಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾನು ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದಾಗ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಆಗ ಅವರೂ ಇಲ್ಲಿ ಶಾಂತಿ ಕೊಡಿ ಎಂಬ ಮಾತನ್ನಾಡಿದ್ದಾರೆ ಎಂದು ಹೇಳಿದರು.

 


Share this Story:

Follow Webdunia kannada

ಮುಂದಿನ ಸುದ್ದಿ

5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ : ಸಿದ್ದರಾಮಯ್ಯ