Webdunia - Bharat's app for daily news and videos

Install App

ಕಾಲಿಗೆ ಬಿದ್ದರೂ ಕಡಿಮೆಯಾಗದೇ ಮುನಿರತ್ನ ಮೇಲಿನ ಡಿಕೆಶಿ ಮುನಿಸು?

geetha
ಭಾನುವಾರ, 18 ಫೆಬ್ರವರಿ 2024 (17:27 IST)
ಕಾಂಗ್ರೆಸ್‌ ನ ಜನಸ್ಪಂದನ ಕಾರ್ಯಕ್ರಮವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಬಿಜೆಪಿ ಶಾಸಕ  ಮುನಿರತ್ನ ನಡುವಿನ ಇರಿಸುಮುರಿಸಿಗೂ ಸಹ ವೇದಿಕೆಯಾಯಿತು. ಇಬ್ಬರೂ ವೇದಿಕೆ ಹಂಚಿಕೊಂಡಿದ್ದರೂ ಸಹ, ಮುನಿರತ್ನ ಮಾತನಾಡಲು ಯತ್ನಿಸಿದರೂ ಸಹ ಡಿಕೆಶಿ ಮುಖ ತಿರುಗಿಸಿಕೊಂಡು ಕುಳಿತಿದ್ದು ಕಾರ್ಯಕ್ರಮವಿಡೀ ಸಾಮಾನ್ಯ ದೃಶ್ಯವಾಗಿತ್ತು. ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೆಲ ತಿಂಗಳ ಹಿಂದಷ್ಟೇ ಮುನಿರತ್ನ ಅವರು ಡಿಕೆಶಿ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದಿದ್ದರು. 

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರದ ಅಂತ್ಯಕ್ಕೆ ಕಾರಣವಾಗಿದ್ದ ಶಾಸಕರ ಪೈಕಿ ಮುನಿರತ್ನ ಮುಂಚೂಣಿಯಲ್ಲಿದ್ದರು.ಇದೇ ಕಾರಣಕ್ಕಾಗಿ ಇಬ್ಬರ ನಡುವೆ ಶೀತಲ ಸಮರವೂ ನಡೆಯುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಭದ್ರ ಮತಕ್ಷೇತ್ರ ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಎದುರು ಪ್ರಯಾಸದ ಗೆಲುವು ಸಾಧಿಸಿದ್ದರು.  ಕ್ಷೇತ್ರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ 200 ಕೋಟಿ ರೂ. ಗಳಿಗೂ ಹೆಚ್ಚು ಅವ್ಯವಹಾರ ನಡೆದಿದೆಯೆಂಬ ಆರೋಪದ ಮೇಲೆ ಕಾಂಗ್ರೆಸ್‌ ಸರ್ಕಾರ ಮುನಿರತ್ನ ಕ್ಷೇತ್ರದ ಬಿಲ್‌ ಗಳನ್ನು ತಡೆಹಿಡಿದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments