Webdunia - Bharat's app for daily news and videos

Install App

ಕಾಲಿಗೆ ಬಿದ್ದರೂ ಕಡಿಮೆಯಾಗದೇ ಮುನಿರತ್ನ ಮೇಲಿನ ಡಿಕೆಶಿ ಮುನಿಸು?

geetha
ಭಾನುವಾರ, 18 ಫೆಬ್ರವರಿ 2024 (17:27 IST)
ಕಾಂಗ್ರೆಸ್‌ ನ ಜನಸ್ಪಂದನ ಕಾರ್ಯಕ್ರಮವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಬಿಜೆಪಿ ಶಾಸಕ  ಮುನಿರತ್ನ ನಡುವಿನ ಇರಿಸುಮುರಿಸಿಗೂ ಸಹ ವೇದಿಕೆಯಾಯಿತು. ಇಬ್ಬರೂ ವೇದಿಕೆ ಹಂಚಿಕೊಂಡಿದ್ದರೂ ಸಹ, ಮುನಿರತ್ನ ಮಾತನಾಡಲು ಯತ್ನಿಸಿದರೂ ಸಹ ಡಿಕೆಶಿ ಮುಖ ತಿರುಗಿಸಿಕೊಂಡು ಕುಳಿತಿದ್ದು ಕಾರ್ಯಕ್ರಮವಿಡೀ ಸಾಮಾನ್ಯ ದೃಶ್ಯವಾಗಿತ್ತು. ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೆಲ ತಿಂಗಳ ಹಿಂದಷ್ಟೇ ಮುನಿರತ್ನ ಅವರು ಡಿಕೆಶಿ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದಿದ್ದರು. 

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರದ ಅಂತ್ಯಕ್ಕೆ ಕಾರಣವಾಗಿದ್ದ ಶಾಸಕರ ಪೈಕಿ ಮುನಿರತ್ನ ಮುಂಚೂಣಿಯಲ್ಲಿದ್ದರು.ಇದೇ ಕಾರಣಕ್ಕಾಗಿ ಇಬ್ಬರ ನಡುವೆ ಶೀತಲ ಸಮರವೂ ನಡೆಯುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಭದ್ರ ಮತಕ್ಷೇತ್ರ ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಎದುರು ಪ್ರಯಾಸದ ಗೆಲುವು ಸಾಧಿಸಿದ್ದರು.  ಕ್ಷೇತ್ರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ 200 ಕೋಟಿ ರೂ. ಗಳಿಗೂ ಹೆಚ್ಚು ಅವ್ಯವಹಾರ ನಡೆದಿದೆಯೆಂಬ ಆರೋಪದ ಮೇಲೆ ಕಾಂಗ್ರೆಸ್‌ ಸರ್ಕಾರ ಮುನಿರತ್ನ ಕ್ಷೇತ್ರದ ಬಿಲ್‌ ಗಳನ್ನು ತಡೆಹಿಡಿದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments