Select Your Language

Notifications

webdunia
webdunia
webdunia
webdunia

ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ: ಅಂಜನೇಯ

ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ: ಅಂಜನೇಯ
ಬೆಂಗಳೂರು , ಸೋಮವಾರ, 17 ಜುಲೈ 2017 (12:32 IST)
ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ, ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ.ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದ್ದಾರೆ.
 
ಹಿಂದುಳಿದ, ಎಡ, ಬಲ ಜಾತಿಗಳ ನಾಯಕರಿಗೆ ಪದಾಧಿಕಾರಿಗಳ ನೇಮಕದಲ್ಲಿ ಸ್ಥಾನ ದೊರೆತಿಲ್ಲ ಎನ್ನುವ ವರದಿಗಳನ್ನು ತಳ್ಳಿ ಹಾಕಿ ಪ್ರತಿಯೊಂದು ಸಮುದಾಯಕ್ಕೂ ಅವಕಾಶ ದೊರೆತಿದೆ. ಕೆಲವೊಂದು ಅಸಮಧಾನವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತಂತೆ ಅಸಮಧಾನ ಭುಗಿಲೇಳುವ ಪಕ್ಷ ನಮ್ಮದಲ್ಲ. ಯಾವುದೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು, ಕಾರವಾರ ಸಮುದ್ರತಳದಲ್ಲಿ ಅಪಾರದ ಪ್ರಮಾಣ ನಿಧಿ ಪತ್ತೆ ಹಚ್ಚಿದ ವಿಜ್ಞಾನಿಗಳು..!