Webdunia - Bharat's app for daily news and videos

Install App

ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಬಿಂಬಿಸಲಾಗುತ್ತಿದೆ: ಕುಮಾರಸ್ವಾಮಿ

Webdunia
ಶನಿವಾರ, 29 ಆಗಸ್ಟ್ 2015 (16:37 IST)
ರಾಜ್ಯ ರಾಜಕೀಯದಲ್ಲಿ ಯಾವುದೇ ಬೆಳವಣಿಗೆಗಳಾದಲ್ಲಿ ಜೆಡಿಎಸ್ ಪಕ್ಷದ ಮೇಲೆ ಆರೋಪ ಹೊರಿಸಿ ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಬಿಂಬಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
 
ಬಿಬಿಎಂಪಿ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯಲು ಇನ್ನಿಲ್ಲದಂತೆ ಪ್ರಯತ್ನ ಮಾಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳನ್ನು ಅವಕಾಶವಾದಿ ಪಕ್ಷಗಳು ಎಂದು ಯಾರು ಕರೆಯುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಕಾಂಗ್ರೆಸ್ ಪಕ್ಷದ ಇತರ ಪಕ್ಷದೊಂದಿಗಿನ ಮೈತ್ರಿ ಕುರಿತಂತೆ ಆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
 
ನನಗೆ ಬಿಜೆಪಿ ನಾಯಕರಾಗಲಿ ಅಥವಾ ಕಾಂಗ್ರೆಸ್ ನಾಯಕರಾಗಲಿ ಸಂಪರ್ಕಿಸಿಲ್ಲ. ರಾಜಕೀಯ ಬೆಳವಣಿಗೆಗಳನ್ನು ಕಾದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments