ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ-ಡಾ‌.ಜಿ.ಪರಮೇಶ್ವರ್

geetha
ಗುರುವಾರ, 11 ಜನವರಿ 2024 (15:23 IST)
ಬೆಂಗಳೂರು-ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಡಿಸಿಎಂ ಬೇಕು ಎಂಬ ಕೂಗು ಹೆಚ್ಚಾಗುತ್ತಲ್ಲೇ ಇದೆ. ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚುವರಿ ಡಿಸಿಎಂ ಮಾಡಿದರೆ ಒಳ್ಳೆಯದಾಗುತ್ತದೆ ಅಂತಾ ಸಚಿವ ಕೆಎನ್ ರಾಜಣ್ಣ ಪುನರುಚ್ಚರಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ಮಾಡಲು ದೆಹಲಿಗೆ ತೆರಳುವ ಮುನ್ನ ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಹೈಕಮಾಂಡ್​ಗೆ ಸಲಹೆ ನೀಡಿದ್ದೇವೆ .ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ಧರಿರುವುದಾಗಿ ಹೇಳಿದರು.

ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ಮುಂದೆ ಪ್ರಸ್ತಾಪ ವಿಚಾರ ಕುರಿತು ಸಚಿವ ಡಾ‌.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏನು ಆಗುತ್ತೆ, ಏನು ಮಾಡ್ತಾರೆ ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಕೆ.ಎನ್.ರಾಜಣ್ಣ ಮೊದಲಿಂದ ಹೇಳುತ್ತಿದ್ದಾರೆ.. ಯಾಕೆ ಕೇಳುತ್ತಿದ್ದಾರೆ ಎಂದು ರಾಜಣ್ಣ ವಿವರಣೆ ಕೊಟ್ಟಿದ್ದಾರೆ. ಆಯಾ ಸಮುದಾಯಗಳು ಅಧಿಕಾರದಲ್ಲಿ ಪಾಲುದಾರರು. ನಾವು ಲೋಕಸಭೆಯಲ್ಲಿ ಮತ ಹಾಕಬೇಕು ಎಂಬರ್ಥದಲ್ಲಿ ಹೇಳಿದ್ದಾರೆ.. ಅದರ ಬಗ್ಗೆ ಎಐಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ಅವರಂತೆ ಹೋಗಬೇಕಲ್ಲ.. ಇವತ್ತು ಅಧ್ಯಕ್ಷರು, ರಾಹುಲ್ ಗಾಂಧಿ ಅವರು ಸಭೆ ತೆಗೆದುಕೊಳ್ಳುತ್ತಾರೆ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದ್ರು.

ಇಂದು ನಡೆಯಲಿರುವ ಎಐಸಿಸಿ ಸಭೆಯ ವಿಚಾರವಾಗಿ ಬೆಂಗಳೂರಿನಲ್ಲಿ ಡಾ.ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.. ವರಿಷ್ಠರು ಸಭೆಯನ್ನ ಕರೆದಿದ್ದಾರೆ, ಅಜೆಂಡಾ ಏನು ಅಂತ ಗೊತ್ತಿಲ್ಲ..ಅವರವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಲ್ಲಿ ಹೋದ ಮೇಲೆ ಏನು ನಿರ್ದೇಶನ ಬರುತ್ತೋ ಗೊತ್ತಿಲ್ಲ. ಅನೇಕ ವಿಚಾರಗಳು ಬರುತ್ತವೆ.. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಬೇಕು ಎಂದು ಈಗಾಗಲೇ ಹೇಳಿದ್ದಾರೆ. ಹೈಕಮಾಂಡ್ ಕೊಡುವ ನಿರ್ದೇಶನದ ಪ್ರಕಾರ ನಾವೆಲ್ಲ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಮುಂದಿನ ಸುದ್ದಿ
Show comments