Webdunia - Bharat's app for daily news and videos

Install App

ಗಂಡನ ಮೊಬೈಲ್ಗೆ ಪತ್ನಿಯ ಅಕ್ರಮ ಸಂಬಂಧ ಸಾಕ್ಷಿ ಪತ್ತೆ : ಮಾರಕಾಸ್ತ್ರಗಳಿಂದ ಹೊಡೆದು ಹೆಂಡತಿಯ ಹತ್ಯೆ

Webdunia
ಶುಕ್ರವಾರ, 28 ಜುಲೈ 2023 (11:37 IST)
ಬೆಂಗಳೂರು: ಹೆಂಡತಿಯ ಅಕ್ರಮ ಸಂಬಂಧದ ವಿಡಿಯೋ ಮೊಬೈಲ್ನಲ್ಲಿ ನೋಡಿದ ಪತಿ ಮಾರಕಾಸ್ತ್ರಗಳಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನ ಮೂಡಲಪಾಳ್ಯದ ಶಿವಾನಂದ ನಗರದಲ್ಲಿ ನಡೆದಿದೆ.
 
ಶಂಕರ್ ಕೊಲೆ ಮಾಡಿದ ಆರೋಪಿಯಾಗಿದ್ದು, ಪತ್ನಿ ಗೀತಾಳನ್ನು ಹತ್ಯೆ ಮಾಡಿದ ಬಳಿಕ ಆಕೆಯ ತಾಯಿಗೆ ಕರೆ ಮಾಡಿ ಮಗಳನ್ನು ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ.

ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಆರೋಪಿ ಶಂಕರ್ 13 ವರ್ಷಗಳ ಹಿಂದೆ ಗೀತಾಳನ್ನು ಮದುವೆ ಆಗಿದ್ದ. ಇಬ್ಬರ ಸಂಸಾರಕ್ಕೆ ಸಾಕ್ಷಿ ಎಂಬಂತೆ ಒಂದು ಗಂಡು ಮಗು ಇದೆ. ಆರೋಪಿ ಶಂಕರ್ ಪತ್ನಿ ಗೀತಾ ಬೇರೋಬ್ಬನ ಜೊತೆ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. 

ಹೆಂಡತಿಯ ಮೇಲೆ ಗಂಡನಿಗಿದ್ದ ಅನುಮಾನಕ್ಕೆ ಸಾಕ್ಷಿಯೆಂಬಂತೆ ಒಂದು ವಿಡಿಯೋ ಆತನಿಗೆ ಸಿಗುತ್ತದೆ. ಅಲ್ಲಿಗೆ ಗಂಡ ಶಂಕರ್ಗೆ ಹೆಂಡತಿಯ ಮೇಲಿದ್ದ ಅನುಮಾನ ಸ್ಪಷ್ಟವಾಗಿದೆ.

ಮರ್ಯಾದೆ ಹೋಗುತ್ತದೆ ಎನ್ನುವ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ. ಪತ್ನಿಯ ಅಕ್ರಮ ಸಂಬಂಧ ವಿಡಿಯೋ ಪತಿಯ ಮೊಬೈಲ್ಗೆ ಪತ್ನಿ ಕಳುಹಿಸಿದ್ದು ಮಾತ್ರವಲ್ಲದೇ ಪತ್ನಿ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದ ವ್ಯಕ್ತಿ ಕೂಡ ಶಂಕರ್ಗೆ ಪತ್ನಿಯ ವಿಡಿಯೋವನ್ನು ಕಳುಹಿಸಿದ್ದ. ಈ ವಿಚಾರವಾಗಿ ಕಳೆದ 15 ದಿನದಿಂದ ನಿರಂತರವಾಗಿ ಗಲಾಟೆ ನಡೆಯುತ್ತಿತ್ತು. 

ಇದರಿಂದ ರೊಚ್ಚಿಗೆದ್ದ ಪತಿ ಶಂಕರ್ ತನ್ನ ತಾಯಿಗೆ ಕರೆ ಮಾಡಿ ಮಗನನ್ನು ನೋಡಿಕೋ, ನಾನು ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋಗುವುದಾಗಿ ಹೇಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments