Publish Date: Sun, 28 Jan 2024 (20:00 IST)
Updated Date: Sun, 28 Jan 2024 (20:57 IST)
ಬೆಂಗಳೂರು-ಚಿತ್ರದುರ್ಗದಲ್ಲಿ ಸರ್ಕಾರದಿಂದ ಹಿಂದುಳಿದ ವರ್ಗಗಳ ಸಮಾವೇಶದ ಕುರಿತಾಗಿ ನಗರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಅಹಿಂದ ವರ್ಗಗಳನ್ನೇ ಮೆಟ್ಟಿಲು ಮಾಡಿಕೊಂಡು ಸಿದ್ದರಾಮಯ್ಯ ಎರಡು ಸಲ ಸಿಎಂ ಆದರು.ಆದರೆ ಅಹಿಂದ ಸಮುದಾಯಗಳಿಗೆ ಏನು ಮಾಡಿದ್ದಾರೆ? ಹಿಂದುಳಿದ ವರ್ಗ, ಎಸ್ ಸಿ, ಎಸ್ ಟಿ, ಜನಾಂಗಕ್ಕೆ ಏನು ಮಾಡಿದ್ದೀರಾ? ದಲಿತರಿಗೆ ಮೀಸಲಿಟ್ಟ 11, 300 ಕೋಟಿ ರೂ. ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದಾರೆ. ದಲಿತರ ಹಣ ಡೈವರ್ಟ್ ಯಾಕೆ ಮಾಡಿದ್ದೀರಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಪ್ರಶ್ನಿಸಿದ್ದಾರೆ.