Webdunia - Bharat's app for daily news and videos

Install App

ಅರಗ ಜ್ಞಾನೇಂದ್ರ ಕಠಿಣ ಕ್ರಮದ ಗೃಹಸಚಿವರು, ಪರಮೇಶ್ವರ್ ಆಕಸ್ಮಿಕ ಗೃಹಸಚಿವರು

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (15:46 IST)
ಬೆಂಗಳೂರು: ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಒಂದು ಆಕಸ್ಮಿಕ ಘಟನೆ ಎಂದಿರುವ ಗೃಹಸಚಿವ ಜಿ ಪರಮೇಶ್ವರ್ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದಾರೆ.

ನಾಗಮಂಗಲದಲ್ಲಿ ಅಂಗಡಿ ಮುಂಗಟ್ಟುಗಳು ಹತ್ತಿ ಉರಿದರೂ ಗೃಹಸಚಿವರು ಈ ಘಟನೆಯನ್ನು ಒಂದು ಆಕಸ್ಮಿಕ ಎಂದಿರುವುದು ಸಾರ್ವಜನಿಕರಿಂದ ಮತ್ತು ವಿಪಕ್ಷಗಳಿಂದ ಭಾರೀ ಟೀಕೆಗೊಳಗಾಗಿದೆ. ಇದೊಂದು ಆಕಸ್ಮಿಕ ಘಟನೆಯಾ? ನೀವೆಂಥಾ ಗೃಹಸಚಿವರು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇತ್ತ ವಿಪಕ್ಷ ನಾಯಕ ಆರ್ ಅಶೋಕ್ ಕೂಡಾ ನಾಗಮಂಗಲದಲ್ಲಿ ಇಷ್ಟೊಂದು ದೊಡ್ಡ ಗಲಾಟೆಯಾಗಿರುವಾಗ, ಒಂದು ಕೋಮಿನವರು ತಲ್ವಾರ್ ಹಿಡಿದು, ಪೆಟ್ರೋಲ್ ಬಾಂಬ್ ಸುರಿದರೂ ಅದನ್ನು ಆಕಸ್ಮಿಕ ಘಟನೆ ಎಂದು ಹೇಗೆ ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಪರಮೇಶ್ವರ್ ಮತ್ತು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೃಹಸಚಿವರಾಗಿದ್ದ ಅರಗ ಜ್ಞಾನೇಂದ್ರ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಹಿಂದೆ ಅರಗ ಜ್ಞಾನೇಂದ್ರ ಗೃಹಸಚಿವರಾಗಿದ್ದಾಗ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಘಟನೆಗಳಾಗಿದ್ದರೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡುತ್ತಿದ್ದರು. ಹಾಲಿ ಸಚಿವ ಪರಮೇಶ್ವರ್ ಕೂಡಾ ಅವರಿಗಿಂತ ಕಮ್ಮಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಅವರು ಕಠಿಣ ಕ್ರಮ ಎನ್ನುತ್ತಿದ್ದರು. ಇವರೀಗ ಆಕಸ್ಮಿಕ ಎನ್ನುತ್ತಿದ್ದು ಆಕಸ್ಮಿಕ ಗೃಹಸಚಿವರು ಎಂದು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ತಮ್ಮನ್ನು ಆಕಸ್ಮಿಕ ಗೃಹಸಚಿವರು ಎನ್ನುತ್ತಿರುವುದು ಪರಮೇಶ್ವರ್ ಗೂ ತಿಳಿದುಬಂದಿದ್ದು, ಹೌದ್ರೀ ನಾನು ಆಕಸ್ಮಿಕ ಗೃಹಸಚಿವ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments