ನನ್ನ ಮಾತನ್ನು ಅರ್ಥೈಸಿಕೊಳ್ಳದ ನೀವೆಂಥಾ ಸಾಹಿತಿ ಎಂದು ಪ್ರತಾಪ್ ಸಿಂಹರಿಗೆ ಟಾಂಗ್ ಕೊಟ್ಟ ವಿಶ್ವನಾಥ್

Webdunia
ಭಾನುವಾರ, 27 ನವೆಂಬರ್ 2016 (18:42 IST)
ಮೈಸೂರು: ಪ್ರಧಾನಿಯನ್ನು ಹೊಗಳುವ ನೆಪದಲ್ಲಿ ಬಿಜೆಪಿಯವರು ಪ್ರತಿಪಕ್ಷಗಳನ್ನು ಖಳನಾಯಕರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿಶ್ವನಾಥ್ ಟೀಕಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಟೀಕೆ ಮಾಡಿದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ.

ನೋಟು ನಿಷೇಧ ವಿಚಾರದಲ್ಲಿ ಪ್ರಧಾನಿ ಮೋದಿ ಕೈಗೊಂಡ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದ ವಿಶ್ವನಾಥ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್ ನಾನು ಪ್ರಧಾನಿಯವರನ್ನು ಅಸಂಬದ್ಧ ಶಬ್ಧಗಳಿಂದ ನಿಂದಿಸಿಲ್ಲ. ನನ್ನ ಮಾತನ್ನು ಅರ್ಥ ಮಾಡಿಕೊಳ್ಳದ ನೀವೆಂಥಾ ಸಾಹಿತಿ ಎಂದು ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಕಾಳಧನವಿರುವ ಕಾರಣವೇ ವಿಶ್ವನಾಥ್ ಪ್ರಧಾನಿಯವನ್ನು ಟೀಕಿಸಿರಬೇಕು ಎಂದು ಪ್ರತಾಪ್ ಹೇಳಿದ ಹೇಳಿಕೆಗೆ ಉತ್ತರಿಸಿದ ಅವರು ನನ್ನ ಮಕ್ಕಳು ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ. ನಾನೂ ಐಷಾರಾಮಿ ಜೀವನ ಮಾಡುತ್ತಿಲ್ಲ. ನನ್ನ ಬಳಿ ಕಾಳಧನವಿದ್ದರೆ ತನಿಖೆ ನಡೆಸಲಿ ಎಂದು ವಿಶ್ವನಾಥ್ ಪ್ರತಾಪ್ ಸಿಂಹರಿಗೆ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments