Select Your Language

Notifications

webdunia
webdunia
webdunia
webdunia

ನಾಯಕತ್ವ ಬದಲಾವಣೆ ಆಗಬೇಕೆಂದು ಹೇಳಿಲ್ಲ: ಯೂ-ಟರ್ನ್ ಹೊಡೆದ ಖಮರುಲ್

ನಾಯಕತ್ವ ಬದಲಾವಣೆ ಆಗಬೇಕೆಂದು ಹೇಳಿಲ್ಲ: ಯೂ-ಟರ್ನ್ ಹೊಡೆದ ಖಮರುಲ್
ಬೆಂಗಳೂರು , ಗುರುವಾರ, 30 ಜೂನ್ 2016 (16:17 IST)
ಪಕ್ಷದ ವೇದಿಕೆಯಲ್ಲಿ ನಿಮ್ಮ ಬಗ್ಗೆ ಗಂಭೀರ ಚರ್ಚೆಯಾಗಿದೆ.ಮುಂಬರುವ ದಿನಗಳಲ್ಲಿ ನಿಮಗೆ ನ್ಯಾಯ ದೊರೆಯಲಿದೆ ಎಂದು ಖಮರುಲ್ ಇಸ್ಲಾಂಗೆ ಎಐಸಿಸಿ ಮುಖಂಡ ಚೆಲ್ಲಕುಮಾರ್ ನೀಡಿದ ಭರವಸೆಗೆ ಮಣಿದಿದ್ದಾರೆ.  
 
 ಪಕ್ಷದ ವೇದಿಕೆಯಲ್ಲಿ ನಿಮ್ಮ ಬಗ್ಗೆ ಗಂಭೀರ ಚರ್ಚೆಯಾಗಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಚೆಲ್ಲಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ನಂತರ, ಯು-ಟರ್ನ್ ಹೊಡೆದಿರುವ ಖಮರುಲ್, ನಾನು ಯಾವತ್ತೂ ನಾಯಕತ್ವ ಬದಲಾವಣೆಯಾಗಬೇಕು ಎಂದು ಹೇಳಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾತ್ರ ಹೇಳಿದ್ದಾಗಿ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೈಗಾರಿಕೆ- ಸರಕಾರಿ ಸಹಭಾಗಿತ್ವದಲ್ಲಿ ಪಾಲುದಾರಿಕೆ: ಸಿಎಂ ಸಿದ್ದರಾಮಯ್ಯ