Webdunia - Bharat's app for daily news and videos

Install App

ಬರಹಗಾರ್ತಿ, ಮಾಜಿ ಕೇಂದ್ರ ಸಚಿವೆ ಸರೋಜಿನಿ ಮಹಿಷಿ ಇನ್ನಿಲ್ಲ

Webdunia
ಭಾನುವಾರ, 25 ಜನವರಿ 2015 (16:08 IST)
ಮಾಜಿ ಕೇಂದ್ರ ಸಚಿವೆ,ಧಾರವಾಡ ಕ್ಷೇತ್ರದ ಮಾಜಿ ಸಂಸದೆ ಸರೋಜಿನಿ ಮಹಿಷಿ ಅವರು ಉತ್ತರ ಪ್ರದೇಶದ ಗಾಜಿಯಾಬಾದ್‌ ನಿವಾಸದಲ್ಲಿ ಭಾನುವಾರ ನಿಧನ ಹೊಂದಿದ್ದಾರೆ, ಅವರಿಗೆ 88 ವರ್ಷ ಪ್ರಾಯ ವಯಸ್ಸಾಗಿತ್ತು.
 
ಸರೋಜಿನಿ ಮಹಿಷಿ ಧಾರವಾಡ ಕ್ಷೇತ್ರದಿಂದ ನಾಲ್ಕು ಬಾರಿ ಸಂಸತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾಜ್ಯ ಸಭಾ ಸದಸ್ಯೆ,ರಾಜ್ಯ ಸಭಾ ಉಪಸಭಾಪತಿಯಾಗಿಯೂ ಕೆಲಸ ನಿರ್ವಹಿಸಿದ್ದರು.
 
1983 ರಲ್ಲಿ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸರೋಜಿನಿ ಮಹಿಷಿ ಅವರು ರೇಲ್ವೇ ಇಲಾಖೆ ಮತ್ತು ಸಾರ್ವಜನಿಕ ವಲಯದ ಹುದ್ದೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಕುರಿತಾಗಿ ''ಸರೋಜಿನಿ ಮಹಿಷಿ ವರದಿ'' ತಯಾರು ಮಾಡಿದ್ದರು.
 
ಬರಹಗಾರ್ತಿಯಾಗಿಯೂ ಹೆಸರು ಮಾಡಿದ್ದ ಸರೋಜಿನಿ ಅವರು ಕನ್ನಡ ಮತ್ತು ಹಿಂದಿ ಕಾದಂಬರಿಗಳನ್ನು ಹಿಂದಿಗೆ ಅನುವಾದ ಮಾಡಿದ್ದರು. ಡಿವಿಜಿ ಅವರ ಮಂಕು ತಿಮ್ಮನ ಕಗ್ಗವನ್ನು ಹಿಂದಿಗೆ ಅನುವಾದಿಸಿದ್ದರು.
 
ಕಳೆದ ಕೆಲ ವರ್ಷಗಳಿಂದ ದೆಹಲಿಯಲ್ಲಿ ನೆಲೆಸಿದ್ದ ಸರೋಜಿನಿ ಮಹಿಷಿ ಅವರು ದೆಹಲಿ ಕನ್ನಡಿಗರ ಸಂಘದ ಅಧ್ಯಕ್ಷರಾಗಿ ಕೆಲ ಸನಿರ್ವಹಿಸಿದ್ದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments