Select Your Language

Notifications

webdunia
webdunia
webdunia
webdunia

3 ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ: ಸಿಎಂಗೆ ಶ್ರೀನಿವಾಸ್ ಪ್ರಸಾದ್ ಸವಾಲ್

3 ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ: ಸಿಎಂಗೆ ಶ್ರೀನಿವಾಸ್ ಪ್ರಸಾದ್ ಸವಾಲ್
ಮೈಸೂರು , ಶನಿವಾರ, 14 ಜನವರಿ 2017 (15:55 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧೈರ್ಯ ಇದ್ದರೆ ನಂಜನಗೂಡು ಉಪಚುನಾವಣೆಯಲ್ಲಿ ತನ್ನ ಮೂರು ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಸವಾಲ್ ಎಸೆದಿದ್ದಾರೆ. 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೂ ಸಾಲ ಯೋಜನೆ ಮಾಡಿಲ್ಲ. ಆದರೆ, ನಂಜನಗೂಡಿನಲ್ಲಿ ಮಾತ್ರ ಸಾಲ ಯೋಜನೆ ಜಾರಿ ಮಾಡಿದ್ದಾರೆ. ಈ ಮೂಲಕ ಉಪಚುನಾವಣೆ ಎದುರಿಸುತ್ತಿದ್ದೀರಾ? ಎಂದು ಪ್ರಶ್ನಿಸಿದರು.
 
ಕಾಂಗ್ರೆಸ್ ಪಕ್ಷ ನೈತಿಕವಾಗಿ ದಿವಾಳಿಯಾಗಿದೆ. ನಂಜನಗೂಡು ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಬಳಿ ಅಭ್ಯರ್ಥಿಯೇ ಇಲ್ಲ. ಅಭ್ಯರ್ಥಿ ಹುಡುಕಾಟಕ್ಕಾಗಿ ಸಮಿತಿ ರಚಿಸಿ ಹರಸಾಹಸ ಪಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅವರು ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಶೀತಗಾಳಿಗೆ 9 ಬಲಿ