Webdunia - Bharat's app for daily news and videos

Install App

3 ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ: ಸಿಎಂಗೆ ಶ್ರೀನಿವಾಸ್ ಪ್ರಸಾದ್ ಸವಾಲ್

Webdunia
ಶನಿವಾರ, 14 ಜನವರಿ 2017 (15:55 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧೈರ್ಯ ಇದ್ದರೆ ನಂಜನಗೂಡು ಉಪಚುನಾವಣೆಯಲ್ಲಿ ತನ್ನ ಮೂರು ವರ್ಷದ ಸಾಧನೆ ಇಟ್ಟುಕೊಂಡು ಜನರ ಮುಂದೆ ಬರಲಿ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಸವಾಲ್ ಎಸೆದಿದ್ದಾರೆ. 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲೂ ಸಾಲ ಯೋಜನೆ ಮಾಡಿಲ್ಲ. ಆದರೆ, ನಂಜನಗೂಡಿನಲ್ಲಿ ಮಾತ್ರ ಸಾಲ ಯೋಜನೆ ಜಾರಿ ಮಾಡಿದ್ದಾರೆ. ಈ ಮೂಲಕ ಉಪಚುನಾವಣೆ ಎದುರಿಸುತ್ತಿದ್ದೀರಾ? ಎಂದು ಪ್ರಶ್ನಿಸಿದರು.
 
ಕಾಂಗ್ರೆಸ್ ಪಕ್ಷ ನೈತಿಕವಾಗಿ ದಿವಾಳಿಯಾಗಿದೆ. ನಂಜನಗೂಡು ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಬಳಿ ಅಭ್ಯರ್ಥಿಯೇ ಇಲ್ಲ. ಅಭ್ಯರ್ಥಿ ಹುಡುಕಾಟಕ್ಕಾಗಿ ಸಮಿತಿ ರಚಿಸಿ ಹರಸಾಹಸ ಪಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅವರು ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments