Webdunia - Bharat's app for daily news and videos

Install App

ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Krishnaveni K
ಬುಧವಾರ, 4 ಸೆಪ್ಟಂಬರ್ 2024 (10:08 IST)
ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಸುರೇಶ್ ಕುಮಾರ್ ಗೆ ಜ್ವರ ಬಂದಿತ್ತು. ಆದರೆ ಇದು ತೀವ್ರಗೊಂಡಿದ್ದು ಮೆದುಳಿಗೂ ತಗುಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 3-4 ದಿನಗಳಿಂದ ಸುರೇಶ್ ಕುಮಾರ್ ಜ್ವರದಿಂದ ಬಳಲುತ್ತಿದ್ದಾರೆ.

ಆದರೆ ಅವರ ಪರಿಸ್ಥಿತಿ ಬಿಗಡಾಯಿಸಿದ ಕಾರಣ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ದೋಸ್ತಿಗಳ ಪಾದಯಾತ್ರೆಯಲ್ಲಿ ಸುರೇಶ್ ಕುಮಾರ್ ಭಾಗಿಯಾಗಿದ್ದರು. ಅದಾದ ಬಳಿಕ ತಿರುಪತಿಗೆ ಸೈಕಲ್ ಯಾತ್ರೆ ನಡೆಸಿದ್ದರು. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿದ್ದಾಗ ಶಿಕ್ಷಣ ಸಚಿವರಾಗಿ ಸುರೇಶ್ ಕುಮಾರ್ ಕಾರ್ಯನಿರ್ವಹಿಸಿದ್ದರು. ಸಜ್ಜನ ಮತ್ತು ಸರಳ ರಾಜಕಾರಣಿ ಎಂದೇ ಜನರಿಂದ ಗುರುತಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments